23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬಳಂಜ ಸ.ಉ.ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಕೈಗಾರಿಕೋದ್ಯಮಿ ಕೃಷ್ಣ ಸಂಪಿಗೆತ್ತಾಯ ಭೇಟಿ

ಬಳಂಜ : ಬೆಂಗಳೂರಿನ ಪ್ರಸಿದ್ಧ ಕೈಗಾರಿಕೋದ್ಯಮಿಗಳು ಹಾಗೂ ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರವರು ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಬಳಂಜಕ್ಕೆ ಭೇಟಿ ನೀಡಿದರು.

ಸಂಪಿಗೆತ್ತಾಯರು ಕೈಗಾರಿಕೋದ್ಯಮಿಗಳಾಗಿದ್ದುಕೊಂಡು ಸಾಮಾಜಿಕ ಬದ್ಧತೆಯಿಂದ ಅನೇಕ ಸಮಾಜಮುಖಿ ಕೆಲಸ ಕಾರ್ಯಗಳನ್ನು ನಡೆಸಿಕೊಂಡು ಬಂದಿರುತ್ತಾರೆ. ಇತ್ತೀಚಿಗೆ ಅಮೃತ ಮಹೋತ್ಸವ ಆಚರಿಸಿದ ಶಾಲೆಯ ಬದಲಾವಣೆಯ ಬಗ್ಗೆ ಸಂತಸ ವ್ಯಕ್ತ ಪಡಿಸಿದರು. ಸರಕಾರೀ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಬೆಳೆಸುವ ನಿಟ್ಟಿನಲ್ಲಿ ವ್ಯಸ್ತವಾಗಿರುವ ಬಳಂಜ ಶಿಕ್ಷಣ ಟ್ರಸ್ಟ್ ಮತ್ತು ಊರ ಹಳೆವಿದ್ಯಾರ್ಥಿಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುತ್ತಾ ಅಶ್ವಥ್ ಹೆಗ್ಡೆ ಫೌಂಡೇಶನ್ ಮೂಲಕ ಶಾಲೆಯಲ್ಲಿ ನಡೆಸಿದ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚುತ್ತಾ ತಮ್ಮ ಸಂಪೂರ್ಣ ಸಹಕಾರ ಮಾರ್ಗದರ್ಶನ ನೀಡುತ್ತೇವೆ ಎಂದರು.

ಈ ಸಂಧರ್ಭದಲ್ಲಿ ಬಳಂಜ ಶಾಲಾ ಶಿಕ್ಷಕರು, ಶಿಕ್ಷಣ ಟ್ರಸ್ಟಿನ ಅಧ್ಯಕ್ಷರಾದ ಮನು ಬಳಂಜ ,ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರು ಚಂದ್ರಶೇಖರ್ ಪಿ ಕೆ , ಸಂತೋಷ್ ಸಾಲಿಯಾನ್ , ದಿನೇಶ್ ಪಿ ಕೆ ಹಾಗೂ ಇತರ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಗೌರವಿಸಲಾಯಿತು.

Related posts

ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ ನಿಧನ

Suddi Udaya

ಸ್ಫೋಟ ಪ್ರಕರಣ: ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡದಿಂದ ಸ್ಥಳ ಮಹಜರು

Suddi Udaya

ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್‌ನಲ್ಲಿ “ಚಿನ್ನದಂತ ನನ್ನ ಅಪ್ಪ” ವಿಶೇಷ ಅನುಬಂಧದ ಕಾರ್ಯಕ್ರಮ

Suddi Udaya

ನಿಟ್ಟಡೆ ಕುಂಭಶ್ರೀ ಶಾಲಾ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!