25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬಳಂಜ ಸ.ಉ.ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಕೈಗಾರಿಕೋದ್ಯಮಿ ಕೃಷ್ಣ ಸಂಪಿಗೆತ್ತಾಯ ಭೇಟಿ

ಬಳಂಜ : ಬೆಂಗಳೂರಿನ ಪ್ರಸಿದ್ಧ ಕೈಗಾರಿಕೋದ್ಯಮಿಗಳು ಹಾಗೂ ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರವರು ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಬಳಂಜಕ್ಕೆ ಭೇಟಿ ನೀಡಿದರು.

ಸಂಪಿಗೆತ್ತಾಯರು ಕೈಗಾರಿಕೋದ್ಯಮಿಗಳಾಗಿದ್ದುಕೊಂಡು ಸಾಮಾಜಿಕ ಬದ್ಧತೆಯಿಂದ ಅನೇಕ ಸಮಾಜಮುಖಿ ಕೆಲಸ ಕಾರ್ಯಗಳನ್ನು ನಡೆಸಿಕೊಂಡು ಬಂದಿರುತ್ತಾರೆ. ಇತ್ತೀಚಿಗೆ ಅಮೃತ ಮಹೋತ್ಸವ ಆಚರಿಸಿದ ಶಾಲೆಯ ಬದಲಾವಣೆಯ ಬಗ್ಗೆ ಸಂತಸ ವ್ಯಕ್ತ ಪಡಿಸಿದರು. ಸರಕಾರೀ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಬೆಳೆಸುವ ನಿಟ್ಟಿನಲ್ಲಿ ವ್ಯಸ್ತವಾಗಿರುವ ಬಳಂಜ ಶಿಕ್ಷಣ ಟ್ರಸ್ಟ್ ಮತ್ತು ಊರ ಹಳೆವಿದ್ಯಾರ್ಥಿಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುತ್ತಾ ಅಶ್ವಥ್ ಹೆಗ್ಡೆ ಫೌಂಡೇಶನ್ ಮೂಲಕ ಶಾಲೆಯಲ್ಲಿ ನಡೆಸಿದ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚುತ್ತಾ ತಮ್ಮ ಸಂಪೂರ್ಣ ಸಹಕಾರ ಮಾರ್ಗದರ್ಶನ ನೀಡುತ್ತೇವೆ ಎಂದರು.

ಈ ಸಂಧರ್ಭದಲ್ಲಿ ಬಳಂಜ ಶಾಲಾ ಶಿಕ್ಷಕರು, ಶಿಕ್ಷಣ ಟ್ರಸ್ಟಿನ ಅಧ್ಯಕ್ಷರಾದ ಮನು ಬಳಂಜ ,ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರು ಚಂದ್ರಶೇಖರ್ ಪಿ ಕೆ , ಸಂತೋಷ್ ಸಾಲಿಯಾನ್ , ದಿನೇಶ್ ಪಿ ಕೆ ಹಾಗೂ ಇತರ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಗೌರವಿಸಲಾಯಿತು.

Related posts

ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿಯನ್ನು ಬಂಧಿಸಿದ ಕಾರ್ಕಳ ಪೊಲೀಸರು

Suddi Udaya

ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಸಿರಿ ಕೇಂದ್ರ ಕಛೇರಿಗೆ ಭೇಟಿ

Suddi Udaya

ಟೀಂ ಅಭಯಹಸ್ತ ವತಿಯಿಂದ ಅಳದಂಗಡಿ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಗುಳಿಗ ಸಾನಿಧ್ಯ ಅಭಿವೃದ್ಧಿ ಕಾರ್ಯಕ್ಕೆ ಸಹಕಾರ

Suddi Udaya

ಬೆಳ್ತಂಗಡಿ: ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ಶಿಶಿಲ ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya
error: Content is protected !!