23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

ಬೆಳ್ತಂಗಡಿ: ಭಾರತದ ಜನಗಣತಿಯ ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿ'ಪ್ರಕ್ರಿಯೆಯು ಏಪ್ರಿಲ್ 1 ರಿಂದ ಅಧಿಕೃತವಾಗಿ ಆರಂಭಗೊಂಡಿದೆ. ಈ ಬಾರಿ ಸಾರ್ವಜನಿಕರಿಗೆ ತಮ್ಮ ವಿವರಗಳನ್ನು ತಾವೇ ಆನ್‌ಲೈನ್ ಮೂಲಕ ದಾಖಲಿಸಲು 'ಸ್ವಯಂ ಗಣತಿ' ಎಂಬ ವಿಶೇಷ ಅವಕಾಶ ಕಲ್ಪಿಸಲಾಗಿದೆ. ಕಂದಾಯ ಇಲಾಖೆ ಆದೇಶದಂತೆ, ಏ.೧ರಿಂದ ೧೫ರವರೆಗೆ ಸಾರ್ವಜನಿಕರು ಸ್ವಯಂ ಗಣತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಭಾರತ ಸರ್ಕಾರದ ಅಧಿಕೃತ ವೆಬ್ ಪೋರ್ಟಲ್ https://se.census.gov.in ಮೂಲಕ ಸಾರ್ವಜನಿಕರು ನೇರವಾಗಿ ಮನೆಯ ವಿವರಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ. ಮನೆಯ ಒಬ್ಬ ಸದಸ್ಯರು ಸುಮಾರು 15 ರಿಂದ 20 ನಿಮಿಷಗಳಲ್ಲಿ ಕುಟುಂಬದ ವಿವರಗಳನ್ನು ಪೋರ್ಟಲ್‌ನಲ್ಲಿ ಭರ್ತಿ ಮಾಡಬಹುದು. ವಿವರಗಳನ್ನು ಸಲ್ಲಿಸಿದ ನಂತರ, ಅರ್ಜಿದಾರರ ಮೊಬೈಲ್ ಅಥವಾ ಇ-ಮೇಲ್‌ಗೆ ಸ್ವಯಂ ಗಣತಿ ಐಡಿ’ ಬರಲಿದೆ. ಮುಂದೆ ಗಣತಿದಾರರು ಮನೆಗೆ ಭೇಟಿ ನೀಡಿದಾಗ, ಈ ಐಡಿ ನೀಡಿ ಮಾಹಿತಿ ದೃಢೀಕರಿಸಬೇಕಾಗುತ್ತದೆ.

ಜಾಗೃತಿ ಮೂಡಿಸಲು ಸೂಚನೆ: ಪ್ರಕ್ರಿಯೆ ಸುಗಮ ಗೊಳಿಸಲು ಸರ್ಕಾರವು ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು, ಇಲಾಖಾ ಮುಖ್ಯಸ್ಥರಿಗೆ ಸೂಚನೆ ನೀಡಿದೆ. ಸರ್ಕಾರಿ ನೌಕರರು ಮಾತ್ರವಲ್ಲದೆ, ಸಾಮಾನ್ಯ ನಾಗರಿಕರಿಗೂ ಈ ಬಗ್ಗೆ ಅರಿವು ಮೂಡಿಸಲು ಮತ್ತು ಗರಿಷ್ಠ ಸಂಖ್ಯೆಯಲ್ಲಿ ಜನರು ಸ್ವಯಂ ಗಣತಿಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಲು ಆದೇಶಿಸಲಾಗಿದೆ.

Related posts

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಲಾಯಿಲ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಮೇದ ಕೃಷ್ಣ ದ್ವಿತೀಯ ಸ್ಥಾನ

Suddi Udaya

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ರವರು ಭೇಟಿ

Suddi Udaya

ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರ

Suddi Udaya
error: Content is protected !!