23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

ಬೆಳ್ತಂಗಡಿ: ಭಾರತದ ಜನಗಣತಿಯ ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿ'ಪ್ರಕ್ರಿಯೆಯು ಏಪ್ರಿಲ್ 1 ರಿಂದ ಅಧಿಕೃತವಾಗಿ ಆರಂಭಗೊಂಡಿದೆ. ಈ ಬಾರಿ ಸಾರ್ವಜನಿಕರಿಗೆ ತಮ್ಮ ವಿವರಗಳನ್ನು ತಾವೇ ಆನ್‌ಲೈನ್ ಮೂಲಕ ದಾಖಲಿಸಲು 'ಸ್ವಯಂ ಗಣತಿ' ಎಂಬ ವಿಶೇಷ ಅವಕಾಶ ಕಲ್ಪಿಸಲಾಗಿದೆ. ಕಂದಾಯ ಇಲಾಖೆ ಆದೇಶದಂತೆ, ಏ.೧ರಿಂದ ೧೫ರವರೆಗೆ ಸಾರ್ವಜನಿಕರು ಸ್ವಯಂ ಗಣತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಭಾರತ ಸರ್ಕಾರದ ಅಧಿಕೃತ ವೆಬ್ ಪೋರ್ಟಲ್ https://se.census.gov.in ಮೂಲಕ ಸಾರ್ವಜನಿಕರು ನೇರವಾಗಿ ಮನೆಯ ವಿವರಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ. ಮನೆಯ ಒಬ್ಬ ಸದಸ್ಯರು ಸುಮಾರು 15 ರಿಂದ 20 ನಿಮಿಷಗಳಲ್ಲಿ ಕುಟುಂಬದ ವಿವರಗಳನ್ನು ಪೋರ್ಟಲ್‌ನಲ್ಲಿ ಭರ್ತಿ ಮಾಡಬಹುದು. ವಿವರಗಳನ್ನು ಸಲ್ಲಿಸಿದ ನಂತರ, ಅರ್ಜಿದಾರರ ಮೊಬೈಲ್ ಅಥವಾ ಇ-ಮೇಲ್‌ಗೆ ಸ್ವಯಂ ಗಣತಿ ಐಡಿ’ ಬರಲಿದೆ. ಮುಂದೆ ಗಣತಿದಾರರು ಮನೆಗೆ ಭೇಟಿ ನೀಡಿದಾಗ, ಈ ಐಡಿ ನೀಡಿ ಮಾಹಿತಿ ದೃಢೀಕರಿಸಬೇಕಾಗುತ್ತದೆ.

ಜಾಗೃತಿ ಮೂಡಿಸಲು ಸೂಚನೆ: ಪ್ರಕ್ರಿಯೆ ಸುಗಮ ಗೊಳಿಸಲು ಸರ್ಕಾರವು ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು, ಇಲಾಖಾ ಮುಖ್ಯಸ್ಥರಿಗೆ ಸೂಚನೆ ನೀಡಿದೆ. ಸರ್ಕಾರಿ ನೌಕರರು ಮಾತ್ರವಲ್ಲದೆ, ಸಾಮಾನ್ಯ ನಾಗರಿಕರಿಗೂ ಈ ಬಗ್ಗೆ ಅರಿವು ಮೂಡಿಸಲು ಮತ್ತು ಗರಿಷ್ಠ ಸಂಖ್ಯೆಯಲ್ಲಿ ಜನರು ಸ್ವಯಂ ಗಣತಿಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಲು ಆದೇಶಿಸಲಾಗಿದೆ.

Related posts

ಧರ್ಮಸ್ಥಳ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya

ಉಜಿರೆ ಶ್ರೀ ಧ.ಮ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಅಭಿವ್ಯಕ್ತಿ ಧಾರೆ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

‌ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಮ್ ಇದರ 60ನೇ ವರ್ಷದ ವಾರ್ಷಿಕ ಹಾಗೂ ಗುರುಮಂದಿರದ ಪ್ರತಿಷ್ಠಾ ವಾರ್ಷಿಕದ ಅಂಗವಾಗಿ ಗುರುಪೂಜೆ ಹಾಗೂ ವಾರ್ಷಿಕ ಮಹಾಸಭೆ

Suddi Udaya
error: Content is protected !!