September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

ಬೆಳ್ತಂಗಡಿ: ಭಾರತದ ಜನಗಣತಿಯ ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿ'ಪ್ರಕ್ರಿಯೆಯು ಏಪ್ರಿಲ್ 1 ರಿಂದ ಅಧಿಕೃತವಾಗಿ ಆರಂಭಗೊಂಡಿದೆ. ಈ ಬಾರಿ ಸಾರ್ವಜನಿಕರಿಗೆ ತಮ್ಮ ವಿವರಗಳನ್ನು ತಾವೇ ಆನ್‌ಲೈನ್ ಮೂಲಕ ದಾಖಲಿಸಲು 'ಸ್ವಯಂ ಗಣತಿ' ಎಂಬ ವಿಶೇಷ ಅವಕಾಶ ಕಲ್ಪಿಸಲಾಗಿದೆ. ಕಂದಾಯ ಇಲಾಖೆ ಆದೇಶದಂತೆ, ಏ.೧ರಿಂದ ೧೫ರವರೆಗೆ ಸಾರ್ವಜನಿಕರು ಸ್ವಯಂ ಗಣತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಭಾರತ ಸರ್ಕಾರದ ಅಧಿಕೃತ ವೆಬ್ ಪೋರ್ಟಲ್ https://se.census.gov.in ಮೂಲಕ ಸಾರ್ವಜನಿಕರು ನೇರವಾಗಿ ಮನೆಯ ವಿವರಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ. ಮನೆಯ ಒಬ್ಬ ಸದಸ್ಯರು ಸುಮಾರು 15 ರಿಂದ 20 ನಿಮಿಷಗಳಲ್ಲಿ ಕುಟುಂಬದ ವಿವರಗಳನ್ನು ಪೋರ್ಟಲ್‌ನಲ್ಲಿ ಭರ್ತಿ ಮಾಡಬಹುದು. ವಿವರಗಳನ್ನು ಸಲ್ಲಿಸಿದ ನಂತರ, ಅರ್ಜಿದಾರರ ಮೊಬೈಲ್ ಅಥವಾ ಇ-ಮೇಲ್‌ಗೆ ಸ್ವಯಂ ಗಣತಿ ಐಡಿ’ ಬರಲಿದೆ. ಮುಂದೆ ಗಣತಿದಾರರು ಮನೆಗೆ ಭೇಟಿ ನೀಡಿದಾಗ, ಈ ಐಡಿ ನೀಡಿ ಮಾಹಿತಿ ದೃಢೀಕರಿಸಬೇಕಾಗುತ್ತದೆ.

ಜಾಗೃತಿ ಮೂಡಿಸಲು ಸೂಚನೆ: ಪ್ರಕ್ರಿಯೆ ಸುಗಮ ಗೊಳಿಸಲು ಸರ್ಕಾರವು ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು, ಇಲಾಖಾ ಮುಖ್ಯಸ್ಥರಿಗೆ ಸೂಚನೆ ನೀಡಿದೆ. ಸರ್ಕಾರಿ ನೌಕರರು ಮಾತ್ರವಲ್ಲದೆ, ಸಾಮಾನ್ಯ ನಾಗರಿಕರಿಗೂ ಈ ಬಗ್ಗೆ ಅರಿವು ಮೂಡಿಸಲು ಮತ್ತು ಗರಿಷ್ಠ ಸಂಖ್ಯೆಯಲ್ಲಿ ಜನರು ಸ್ವಯಂ ಗಣತಿಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಲು ಆದೇಶಿಸಲಾಗಿದೆ.

Related posts

ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ : ಸ್ಥಳೀಯರ ಸಹಕಾರದಲ್ಲಿ ಇಲಾಖೆಯಿಂದ ತೆರವು

Suddi Udaya

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಿಲಾನ್ಯಾಸ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ಗುರುವಾರ, ಶುಭ ಶುಕ್ರವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya
error: Content is protected !!