September 6, 2026
ಚಿತ್ರ ವರದಿಚುನಾವಣೆಪುತ್ತೂರು

ಮಂಜೇಶ್ವರ ವಿಧಾನಸಭಾ ಕ್ಷೇತ್ರ ಚುನಾವಣೆ: ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ರವರ ಪರವಾಗಿ ಎಂಎಲ್‌ಸಿ ಕಿಶೋರ್ ಕುಮಾರ್ ಪುತ್ತೂರು ಮತಯಾಚನೆ

ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರ ಪ್ರತಿ ಚುನಾವಣೆಯಲ್ಲೂ ಕಠಿಣ ಸ್ಪರ್ಧೆ ನಡೆಯುವ “ಹಾಟ್ ಸೀಟ್” ಎಂದು ಪರಿಗಣಿಸಲಾಗುವ ಕ್ಷೇತ್ರ. ಪ್ರತೀ ಚುನಾವಣೆಯಲ್ಲಿ ಅತೀ ಕಡಿಮೆ ಅಂತರದಲ್ಲಿ ಸೋಲುವ ಬಿಜೆಪಿ ಈ ಬಾರಿ ಕಮಲ ಅರಳಿಸಲು ಶತಾಯಗತಾಯ ಪ್ರಯತ್ನ ಮಾಡುತ್ತಿದೆ ಈ ನಿಟ್ಟಿನಲ್ಲಿ ತುಳು ಕನ್ನಡ ಮಾತನಾಡುವ ಜನರೇ ಅಧಿಕವಾಗಿರುವ
ಎಣ್ಮಕಜೆ ವ್ಯಾಪ್ತಿಯ ಕಂಡೇರಿ ಗ್ರಾಮ ಪಂಚಾಯತ್ನಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ರವರ ಪರವಾಗಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಎಲ್ ಡಿ ಎಫ್ ಹಾಗೂ ಯುಡಿಎಫ್ ನ ಆಡಳಿತ ವೈಫಲ್ಯ ಕಾಸರಗೋಡಿನ ಜ್ವಲಂತ ಸಮಸ್ಯೆಗಳಿಂದ ಬೇಸತ್ತಿರುವ ಜೊತೆಗೆ ನವ ಕಾಸರಗೋಡಿನ ನಿರ್ಮಾಣಕ್ಕಾಗಿ ಕಾಸರಗೋಡಿನ ಜನತೆ ಬದಲಾವಣೆಯನ್ನು ಬಯಸಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪದ್ಮನಾಭ ಭಟ್ ಕಂಡೇರಿ , ಪ್ರದೀಪ್ ಭಟ್ ಕಂಡೇರಿ, ಸಾತ್ವಿಕ್ ಕಂಡೇರಿ, ನಾಲ್ಕನೇ ವಾರ್ಡನ ಪಂಚಾಯತ್ ಸದಸ್ಯರಾದ ಪುಷ್ಪಾವತಿ ವಿ ರೈ, ಪಕ್ಷಕ್ಕೆ ಹೊಸದಾಗಿ ಸೇರ್ಪಡೆಗೊಂಡ ಸ್ವಸ್ತಿಕ್ ಕೆಂಗಣಾಜೆ , ಪ್ರಜ್ವಲ್ ಆರ್ ಕೆ ದಂಬೆಕಾನ, ವಿನೋದ್ ಕೊಲ್ಯ, ಪ್ರಶಾಂತ್ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ದೈಹಿಕ ಶಿಕ್ಷಣ ಶಿಕ್ಷಕ ಅಖಿಲ್ ಕುಮಾರ್ ವಿಧಿವಶ

Suddi Udaya

ಎಸ್ ಡಿ ಎಂ ಶಿಕ್ಷಣ ಸಂಸ್ಥೆಯಿಂದ ರೂ. 2.50 ಕೋಟಿ ವಿದ್ಯಾರ್ಥಿವೇತನ ವಿತರಣೆ

Suddi Udaya

ಚಿನ್ನವನ್ನು ತೊಳೆದುಕೊಡುವುದಾಗಿ ಹೇಳಿದಾತ ಸರದೊಂದಿಗೆ ಪರಾರಿ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಮದ್ದಡ್ಕ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ರವರಿಂದ ಯೋಗ ಪ್ರದರ್ಶನ

Suddi Udaya
error: Content is protected !!