ಮಚ್ಚಿನ ಗ್ರಾಮದ ಪಾಲ್ಯರ ಮುರಳಿಧರ ಭಟ್ ರವರ ಮನೆಗೆ ಕಳ್ಳರು ನುಗ್ಗಿ ದರೋಡೆ ನಡೆಸಿದ ಘಟನೆ ಎ.5ರಂದು ರಾತ್ರಿ ನಡೆದಿದೆ.
ರಾತ್ರಿ ಸುಮಾರು 7ರ ಸಮಯದಲ್ಲಿ ಮನೆಯವರು ದೇವಸ್ಥಾನಕ್ಕೆ ತೆರಳಿರುವುದನ್ನು ಖಚಿತಪಡಿಸಿಕೊಂಡ ಕಳ್ಳರು ಯಾರು ಇಲ್ಲದ ಸಮಯದಲ್ಲಿ ಮನೆಯ ಬೀಗ ಮುರಿದು ಒಳಗೆ ನುಗ್ಗಿ, ಕಪಾಟಿನ ಬೀಗ ಮರಿದು ನಗದು ಹಾಗೂ ಆಭರಣವನ್ನು ದೋಚಿ ಪರಾರಿಯಾಗಿದ್ದಾರೆ. ಮನೆಯವರು ದೇವಸ್ಥಾನದಿಂದ ಮನೆಗೆ ಹಿಂತಿರುಗಿದಾಗ ಈ ಪ್ರಕರಣ ಬೆಳಕಿಗೆ ಬಂದಿದ್ದು ತಕ್ಷಣ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಸ್ಥಳಕ್ಕೆ ಡಿವೈಎಸ್ಪಿ ಸಿ.ಕೆ. ರೋಹಿಣಿ ಭೇಟಿ ನೀಡಿದ್ದಾರೆ.












