22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ‘ವಂದೇ ಪ್ರಕೃತಿ ಮಾತರಂ’ ಕಾರ್ಯಕ್ರಮ

ಬೆಳ್ತಂಗಡಿ: ಬಾಂಜಾರು ಮಲೆ ಪ್ರಕೃತಿಯ ಮಡಿಲಿನಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಯುಗಾದಿಯ ನಿಮಿತ್ತ ಎ5ರಂದು ‘ವಂದೇ ಪ್ರಕೃತಿ ಮಾತರಂ’ ಎಂಬ ವಿಷಯವಾಗಿ ಮೊದಲ ಕಾರ್ಯಕ್ರಮ ನಡೆಯಿತು.

ಅಭಾಸಾಪ ಬೆಳ್ತಂಗಡಿ ಅಧ್ಯಕ್ಷ ಗಣಪತಿ ಭಟ್ ಕುಳಮರ್ವ ಇವರ ಅಧ್ಯಕ್ಷತೆಯಲ್ಲಿ ಪ್ರಕೃತಿಯೊಡಗೂಡಿ ಸುತ್ತಮುತ್ತಲಿನ ಪರಿಸರ ವೀಕ್ಷಣೆಯ ಜೊತೆಗೆ ಗಣಪತಿ ದೇವಳದ ಕೆಲಸದ ಬಗ್ಗೆ ಮಾತುಕತೆಯ ಮೂಲಕ ಮಾಹಿತಿ ಸಂಗ್ರಹಿಸಲಾಯಿತು. ಕಠಿಣವಾದ ದಾರಿಯ ಜೊತೆಗೂಡಿದ ಪಯಣದಲ್ಲಿ ಸುಂದರ ಮನಸುಗಳ ಭೇಟಿ ಮಾಡಿದ ಸಂಭ್ರಮವನ್ನು ಹಂಚಿಕೊಂಡೆವು.

ಸಂಪನ್ಮೂಲ ವ್ಯಕ್ತಿ ಶ್ರೀಧರ್ ಭಟ್ ಅವರು ಪ್ರಕೃತಿಯೊಡನೆ ಮಾನವನ ಸಂವಾದ, ಹಸಿರನ್ನು ಉಳಿಸುವಂತಹ ಅಗತ್ಯತೆಯ ಜೊತೆಗೆ ಅವಶ್ಯಕತೆಯ ಬಗ್ಗೆ ನೆರೆದವರೆಲ್ಲರಿಗೂ ಅರ್ಥೈಸಿಕೊಡುವ ಜೊತೆಗೆ ಸಮಿತಿಯ ಎಲ್ಲರನ್ನೂ ಪರಿಚಯಿಸಿಕೊಟ್ಟರು.

ಗಣಪತಿ ಭಟ್ ಕುಳಮರ್ವ, ಸುಭಾಷಿಣಿ, ಶ್ರೀಧರ ಭಟ್, ರಮೇಶ್ ಮಯ್ಯ, ರಾಮಕೃಷ್ಣ ಭಟ್ ಬದನಾಜೆ, ಅಶ್ವಿಜ ಶ್ರೀಧರ್, ತ್ರಿವಿಕ್ರಮ ಹೆಬ್ಬಾರ್, ಪ್ರಕಾಶ್ ನಾರಾಯಣ್, ಅಖಿಲಾ ಪ್ರಕಾಶ್ ಇವರೆಲ್ಲರ ಗುಂಪು ಭಜನಾ ಕಾರ್ಯಕ್ರಮದ ಮೂಲಕ ಕಾರ್ಯಕ್ರಮ ಆರಂಭಗೊಂಡಿತು.

ನವೀನ್ ನೆರಿಯ ಸ್ವಾಗತಿಸಿದರು. ಅಭಾಸಾಪ ಬೆಳ್ತಂಗಡಿ ತಾಲೂಕಿನ ಕಾರ್ಯದರ್ಶಿ ಸುಭಾಷಿಣಿ ಧನ್ಯವಾದವನ್ನಿತ್ತರು.

Related posts

ಜಿಲ್ಲಾಮಟ್ಟದ ಐಟಿ ಕ್ವಿಜ್‌ ಸ್ಪರ್ಧೆ: ಉಜಿರೆಯ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

Suddi Udaya

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ವೇಣೂರು ಪ್ರಾ.ಕೃ.ಪ. ಸಹಕಾರಿ ಸಂಘದ ನೂತನ “ಫಲ್ಗುಣಿ ಕಟ್ಟಡ” ಲೋಕಾರ್ಪಣೆ

Suddi Udaya

ಧರ್ಮಸ್ಥಳ ಭಕ್ತರಿಂದ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಎಸ್.ಡಿ.ಎಂ ಕಾಲೇಜು (ಸ್ವಾಯತ್ತ) ಉಜಿರೆ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಗ್ರಾ.ಪಂ ಕುವೆಟ್ಟು ಇದರ ಸಹಯೋಗ ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!