26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬಳಂಜ ಸ.ಉ.ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಕೈಗಾರಿಕೋದ್ಯಮಿ ಕೃಷ್ಣ ಸಂಪಿಗೆತ್ತಾಯ ಭೇಟಿ

ಬಳಂಜ : ಬೆಂಗಳೂರಿನ ಪ್ರಸಿದ್ಧ ಕೈಗಾರಿಕೋದ್ಯಮಿಗಳು ಹಾಗೂ ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರವರು ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಬಳಂಜಕ್ಕೆ ಭೇಟಿ ನೀಡಿದರು.

ಸಂಪಿಗೆತ್ತಾಯರು ಕೈಗಾರಿಕೋದ್ಯಮಿಗಳಾಗಿದ್ದುಕೊಂಡು ಸಾಮಾಜಿಕ ಬದ್ಧತೆಯಿಂದ ಅನೇಕ ಸಮಾಜಮುಖಿ ಕೆಲಸ ಕಾರ್ಯಗಳನ್ನು ನಡೆಸಿಕೊಂಡು ಬಂದಿರುತ್ತಾರೆ. ಇತ್ತೀಚಿಗೆ ಅಮೃತ ಮಹೋತ್ಸವ ಆಚರಿಸಿದ ಶಾಲೆಯ ಬದಲಾವಣೆಯ ಬಗ್ಗೆ ಸಂತಸ ವ್ಯಕ್ತ ಪಡಿಸಿದರು. ಸರಕಾರೀ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಬೆಳೆಸುವ ನಿಟ್ಟಿನಲ್ಲಿ ವ್ಯಸ್ತವಾಗಿರುವ ಬಳಂಜ ಶಿಕ್ಷಣ ಟ್ರಸ್ಟ್ ಮತ್ತು ಊರ ಹಳೆವಿದ್ಯಾರ್ಥಿಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುತ್ತಾ ಅಶ್ವಥ್ ಹೆಗ್ಡೆ ಫೌಂಡೇಶನ್ ಮೂಲಕ ಶಾಲೆಯಲ್ಲಿ ನಡೆಸಿದ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚುತ್ತಾ ತಮ್ಮ ಸಂಪೂರ್ಣ ಸಹಕಾರ ಮಾರ್ಗದರ್ಶನ ನೀಡುತ್ತೇವೆ ಎಂದರು.

ಈ ಸಂಧರ್ಭದಲ್ಲಿ ಬಳಂಜ ಶಾಲಾ ಶಿಕ್ಷಕರು, ಶಿಕ್ಷಣ ಟ್ರಸ್ಟಿನ ಅಧ್ಯಕ್ಷರಾದ ಮನು ಬಳಂಜ ,ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರು ಚಂದ್ರಶೇಖರ್ ಪಿ ಕೆ , ಸಂತೋಷ್ ಸಾಲಿಯಾನ್ , ದಿನೇಶ್ ಪಿ ಕೆ ಹಾಗೂ ಇತರ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಗೌರವಿಸಲಾಯಿತು.

Related posts

ಮಾ. 2: ಮುಗೇರಡ್ಕ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ: ಚಪ್ಪರ ಮೂಹೂರ್ತ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ತಪಾಸಣಾ ಶಿಬಿರ

Suddi Udaya

ಕೊಕ್ಕಡ ಗ್ರಾ.ಪಂ.ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂತೆಗೆತ: ಶಿಸ್ತು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ತಾ.ಪಂ. ವ್ಯವಸ್ಥಾಪಕ ಪ್ರಶಾಂತ್

Suddi Udaya

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!