ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬಳಂಜ ಸ.ಉ.ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಕೈಗಾರಿಕೋದ್ಯಮಿ ಕೃಷ್ಣ ಸಂಪಿಗೆತ್ತಾಯ ಭೇಟಿ

ಬಳಂಜ : ಬೆಂಗಳೂರಿನ ಪ್ರಸಿದ್ಧ ಕೈಗಾರಿಕೋದ್ಯಮಿಗಳು ಹಾಗೂ ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರವರು ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಬಳಂಜಕ್ಕೆ ಭೇಟಿ ನೀಡಿದರು.

ಸಂಪಿಗೆತ್ತಾಯರು ಕೈಗಾರಿಕೋದ್ಯಮಿಗಳಾಗಿದ್ದುಕೊಂಡು ಸಾಮಾಜಿಕ ಬದ್ಧತೆಯಿಂದ ಅನೇಕ ಸಮಾಜಮುಖಿ ಕೆಲಸ ಕಾರ್ಯಗಳನ್ನು ನಡೆಸಿಕೊಂಡು ಬಂದಿರುತ್ತಾರೆ. ಇತ್ತೀಚಿಗೆ ಅಮೃತ ಮಹೋತ್ಸವ ಆಚರಿಸಿದ ಶಾಲೆಯ ಬದಲಾವಣೆಯ ಬಗ್ಗೆ ಸಂತಸ ವ್ಯಕ್ತ ಪಡಿಸಿದರು. ಸರಕಾರೀ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಬೆಳೆಸುವ ನಿಟ್ಟಿನಲ್ಲಿ ವ್ಯಸ್ತವಾಗಿರುವ ಬಳಂಜ ಶಿಕ್ಷಣ ಟ್ರಸ್ಟ್ ಮತ್ತು ಊರ ಹಳೆವಿದ್ಯಾರ್ಥಿಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುತ್ತಾ ಅಶ್ವಥ್ ಹೆಗ್ಡೆ ಫೌಂಡೇಶನ್ ಮೂಲಕ ಶಾಲೆಯಲ್ಲಿ ನಡೆಸಿದ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚುತ್ತಾ ತಮ್ಮ ಸಂಪೂರ್ಣ ಸಹಕಾರ ಮಾರ್ಗದರ್ಶನ ನೀಡುತ್ತೇವೆ ಎಂದರು.

ಈ ಸಂಧರ್ಭದಲ್ಲಿ ಬಳಂಜ ಶಾಲಾ ಶಿಕ್ಷಕರು, ಶಿಕ್ಷಣ ಟ್ರಸ್ಟಿನ ಅಧ್ಯಕ್ಷರಾದ ಮನು ಬಳಂಜ ,ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರು ಚಂದ್ರಶೇಖರ್ ಪಿ ಕೆ , ಸಂತೋಷ್ ಸಾಲಿಯಾನ್ , ದಿನೇಶ್ ಪಿ ಕೆ ಹಾಗೂ ಇತರ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಗೌರವಿಸಲಾಯಿತು.

Related posts

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

Suddi Udaya

ಮುಂಡಾಜೆ : ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಓಮಿನಿ ಕಾರು

Suddi Udaya

ಕಳೆಂಜ ಬೂತ್ ಸಂಖ್ಯೆ 174 ರಲ್ಲಿ ಕೈಕೊಟ್ಟ ಮತಯಂತ್ರ: ಮತದಾನ ವಿಳಂಬ

Suddi Udaya

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

Suddi Udaya

ಚಾರ್ಮಾಡಿ ಬೂತ್ ಸಂಖ್ಯೆ 21ರಲ್ಲಿ ಕೈ ಕೊಟ್ಟ ಮತ ಯಂತ್ರ

Suddi Udaya

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!