25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬಳಂಜ ಸ.ಉ.ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಕೈಗಾರಿಕೋದ್ಯಮಿ ಕೃಷ್ಣ ಸಂಪಿಗೆತ್ತಾಯ ಭೇಟಿ

ಬಳಂಜ : ಬೆಂಗಳೂರಿನ ಪ್ರಸಿದ್ಧ ಕೈಗಾರಿಕೋದ್ಯಮಿಗಳು ಹಾಗೂ ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರವರು ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಬಳಂಜಕ್ಕೆ ಭೇಟಿ ನೀಡಿದರು.

ಸಂಪಿಗೆತ್ತಾಯರು ಕೈಗಾರಿಕೋದ್ಯಮಿಗಳಾಗಿದ್ದುಕೊಂಡು ಸಾಮಾಜಿಕ ಬದ್ಧತೆಯಿಂದ ಅನೇಕ ಸಮಾಜಮುಖಿ ಕೆಲಸ ಕಾರ್ಯಗಳನ್ನು ನಡೆಸಿಕೊಂಡು ಬಂದಿರುತ್ತಾರೆ. ಇತ್ತೀಚಿಗೆ ಅಮೃತ ಮಹೋತ್ಸವ ಆಚರಿಸಿದ ಶಾಲೆಯ ಬದಲಾವಣೆಯ ಬಗ್ಗೆ ಸಂತಸ ವ್ಯಕ್ತ ಪಡಿಸಿದರು. ಸರಕಾರೀ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಬೆಳೆಸುವ ನಿಟ್ಟಿನಲ್ಲಿ ವ್ಯಸ್ತವಾಗಿರುವ ಬಳಂಜ ಶಿಕ್ಷಣ ಟ್ರಸ್ಟ್ ಮತ್ತು ಊರ ಹಳೆವಿದ್ಯಾರ್ಥಿಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುತ್ತಾ ಅಶ್ವಥ್ ಹೆಗ್ಡೆ ಫೌಂಡೇಶನ್ ಮೂಲಕ ಶಾಲೆಯಲ್ಲಿ ನಡೆಸಿದ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚುತ್ತಾ ತಮ್ಮ ಸಂಪೂರ್ಣ ಸಹಕಾರ ಮಾರ್ಗದರ್ಶನ ನೀಡುತ್ತೇವೆ ಎಂದರು.

ಈ ಸಂಧರ್ಭದಲ್ಲಿ ಬಳಂಜ ಶಾಲಾ ಶಿಕ್ಷಕರು, ಶಿಕ್ಷಣ ಟ್ರಸ್ಟಿನ ಅಧ್ಯಕ್ಷರಾದ ಮನು ಬಳಂಜ ,ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರು ಚಂದ್ರಶೇಖರ್ ಪಿ ಕೆ , ಸಂತೋಷ್ ಸಾಲಿಯಾನ್ , ದಿನೇಶ್ ಪಿ ಕೆ ಹಾಗೂ ಇತರ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಗೌರವಿಸಲಾಯಿತು.

Related posts

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ: ಡಾ.ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ

Suddi Udaya

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya

ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ

Suddi Udaya

ಬೆಳ್ತಂಗಡಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಶಿರ್ಲಾಲು: ಶ್ರೀ ತುಳಸಿ ಮೆನ್ಸ್ ಪಾರ್ಲರ್ ಶುಭಾರಂಭ

Suddi Udaya
error: Content is protected !!