24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

ಬೆಳ್ತಂಗಡಿ: ಭಾರತದ ಜನಗಣತಿಯ ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿ'ಪ್ರಕ್ರಿಯೆಯು ಏಪ್ರಿಲ್ 1 ರಿಂದ ಅಧಿಕೃತವಾಗಿ ಆರಂಭಗೊಂಡಿದೆ. ಈ ಬಾರಿ ಸಾರ್ವಜನಿಕರಿಗೆ ತಮ್ಮ ವಿವರಗಳನ್ನು ತಾವೇ ಆನ್‌ಲೈನ್ ಮೂಲಕ ದಾಖಲಿಸಲು 'ಸ್ವಯಂ ಗಣತಿ' ಎಂಬ ವಿಶೇಷ ಅವಕಾಶ ಕಲ್ಪಿಸಲಾಗಿದೆ. ಕಂದಾಯ ಇಲಾಖೆ ಆದೇಶದಂತೆ, ಏ.೧ರಿಂದ ೧೫ರವರೆಗೆ ಸಾರ್ವಜನಿಕರು ಸ್ವಯಂ ಗಣತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಭಾರತ ಸರ್ಕಾರದ ಅಧಿಕೃತ ವೆಬ್ ಪೋರ್ಟಲ್ https://se.census.gov.in ಮೂಲಕ ಸಾರ್ವಜನಿಕರು ನೇರವಾಗಿ ಮನೆಯ ವಿವರಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ. ಮನೆಯ ಒಬ್ಬ ಸದಸ್ಯರು ಸುಮಾರು 15 ರಿಂದ 20 ನಿಮಿಷಗಳಲ್ಲಿ ಕುಟುಂಬದ ವಿವರಗಳನ್ನು ಪೋರ್ಟಲ್‌ನಲ್ಲಿ ಭರ್ತಿ ಮಾಡಬಹುದು. ವಿವರಗಳನ್ನು ಸಲ್ಲಿಸಿದ ನಂತರ, ಅರ್ಜಿದಾರರ ಮೊಬೈಲ್ ಅಥವಾ ಇ-ಮೇಲ್‌ಗೆ ಸ್ವಯಂ ಗಣತಿ ಐಡಿ’ ಬರಲಿದೆ. ಮುಂದೆ ಗಣತಿದಾರರು ಮನೆಗೆ ಭೇಟಿ ನೀಡಿದಾಗ, ಈ ಐಡಿ ನೀಡಿ ಮಾಹಿತಿ ದೃಢೀಕರಿಸಬೇಕಾಗುತ್ತದೆ.

ಜಾಗೃತಿ ಮೂಡಿಸಲು ಸೂಚನೆ: ಪ್ರಕ್ರಿಯೆ ಸುಗಮ ಗೊಳಿಸಲು ಸರ್ಕಾರವು ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು, ಇಲಾಖಾ ಮುಖ್ಯಸ್ಥರಿಗೆ ಸೂಚನೆ ನೀಡಿದೆ. ಸರ್ಕಾರಿ ನೌಕರರು ಮಾತ್ರವಲ್ಲದೆ, ಸಾಮಾನ್ಯ ನಾಗರಿಕರಿಗೂ ಈ ಬಗ್ಗೆ ಅರಿವು ಮೂಡಿಸಲು ಮತ್ತು ಗರಿಷ್ಠ ಸಂಖ್ಯೆಯಲ್ಲಿ ಜನರು ಸ್ವಯಂ ಗಣತಿಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಲು ಆದೇಶಿಸಲಾಗಿದೆ.

Related posts

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ 2026 ರ ವೈಎಸ್‌ಕೆಎ 3 ನೇ ರಾಜ್ಯ ಮಟ್ಟದ ಕರಾಟೆ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ ಪ್ರಶಸ್ತಿ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!