22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

ಬೆಳ್ತಂಗಡಿ: ಭಾರತದ ಜನಗಣತಿಯ ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿ'ಪ್ರಕ್ರಿಯೆಯು ಏಪ್ರಿಲ್ 1 ರಿಂದ ಅಧಿಕೃತವಾಗಿ ಆರಂಭಗೊಂಡಿದೆ. ಈ ಬಾರಿ ಸಾರ್ವಜನಿಕರಿಗೆ ತಮ್ಮ ವಿವರಗಳನ್ನು ತಾವೇ ಆನ್‌ಲೈನ್ ಮೂಲಕ ದಾಖಲಿಸಲು 'ಸ್ವಯಂ ಗಣತಿ' ಎಂಬ ವಿಶೇಷ ಅವಕಾಶ ಕಲ್ಪಿಸಲಾಗಿದೆ. ಕಂದಾಯ ಇಲಾಖೆ ಆದೇಶದಂತೆ, ಏ.೧ರಿಂದ ೧೫ರವರೆಗೆ ಸಾರ್ವಜನಿಕರು ಸ್ವಯಂ ಗಣತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಭಾರತ ಸರ್ಕಾರದ ಅಧಿಕೃತ ವೆಬ್ ಪೋರ್ಟಲ್ https://se.census.gov.in ಮೂಲಕ ಸಾರ್ವಜನಿಕರು ನೇರವಾಗಿ ಮನೆಯ ವಿವರಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ. ಮನೆಯ ಒಬ್ಬ ಸದಸ್ಯರು ಸುಮಾರು 15 ರಿಂದ 20 ನಿಮಿಷಗಳಲ್ಲಿ ಕುಟುಂಬದ ವಿವರಗಳನ್ನು ಪೋರ್ಟಲ್‌ನಲ್ಲಿ ಭರ್ತಿ ಮಾಡಬಹುದು. ವಿವರಗಳನ್ನು ಸಲ್ಲಿಸಿದ ನಂತರ, ಅರ್ಜಿದಾರರ ಮೊಬೈಲ್ ಅಥವಾ ಇ-ಮೇಲ್‌ಗೆ ಸ್ವಯಂ ಗಣತಿ ಐಡಿ’ ಬರಲಿದೆ. ಮುಂದೆ ಗಣತಿದಾರರು ಮನೆಗೆ ಭೇಟಿ ನೀಡಿದಾಗ, ಈ ಐಡಿ ನೀಡಿ ಮಾಹಿತಿ ದೃಢೀಕರಿಸಬೇಕಾಗುತ್ತದೆ.

ಜಾಗೃತಿ ಮೂಡಿಸಲು ಸೂಚನೆ: ಪ್ರಕ್ರಿಯೆ ಸುಗಮ ಗೊಳಿಸಲು ಸರ್ಕಾರವು ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು, ಇಲಾಖಾ ಮುಖ್ಯಸ್ಥರಿಗೆ ಸೂಚನೆ ನೀಡಿದೆ. ಸರ್ಕಾರಿ ನೌಕರರು ಮಾತ್ರವಲ್ಲದೆ, ಸಾಮಾನ್ಯ ನಾಗರಿಕರಿಗೂ ಈ ಬಗ್ಗೆ ಅರಿವು ಮೂಡಿಸಲು ಮತ್ತು ಗರಿಷ್ಠ ಸಂಖ್ಯೆಯಲ್ಲಿ ಜನರು ಸ್ವಯಂ ಗಣತಿಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಲು ಆದೇಶಿಸಲಾಗಿದೆ.

Related posts

ವೇಣೂರು ಪೊಲೀಸ್ ಠಾಣಾ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕ

Suddi Udaya

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

Suddi Udaya

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya

ಕೊಯ್ಯೂರಿನ ಮಾವಿನಕಟ್ಟೆ ಪರಂಗಡಿ ನಾಗಬನದಲ್ಲಿ ನಾಗತಂಬಿಲ ಸೇವೆ

Suddi Udaya

ಕುವೆಟ್ಟು: ಮದ್ದಡ್ಕ ನಿವಾಸಿ ಹೆನ್ರಿ ಡಿಸೋಜ ನಿಧನ

Suddi Udaya

ನಾರಾವಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!