22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ‘ವಂದೇ ಪ್ರಕೃತಿ ಮಾತರಂ’ ಕಾರ್ಯಕ್ರಮ

ಬೆಳ್ತಂಗಡಿ: ಬಾಂಜಾರು ಮಲೆ ಪ್ರಕೃತಿಯ ಮಡಿಲಿನಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಯುಗಾದಿಯ ನಿಮಿತ್ತ ಎ5ರಂದು ‘ವಂದೇ ಪ್ರಕೃತಿ ಮಾತರಂ’ ಎಂಬ ವಿಷಯವಾಗಿ ಮೊದಲ ಕಾರ್ಯಕ್ರಮ ನಡೆಯಿತು.

ಅಭಾಸಾಪ ಬೆಳ್ತಂಗಡಿ ಅಧ್ಯಕ್ಷ ಗಣಪತಿ ಭಟ್ ಕುಳಮರ್ವ ಇವರ ಅಧ್ಯಕ್ಷತೆಯಲ್ಲಿ ಪ್ರಕೃತಿಯೊಡಗೂಡಿ ಸುತ್ತಮುತ್ತಲಿನ ಪರಿಸರ ವೀಕ್ಷಣೆಯ ಜೊತೆಗೆ ಗಣಪತಿ ದೇವಳದ ಕೆಲಸದ ಬಗ್ಗೆ ಮಾತುಕತೆಯ ಮೂಲಕ ಮಾಹಿತಿ ಸಂಗ್ರಹಿಸಲಾಯಿತು. ಕಠಿಣವಾದ ದಾರಿಯ ಜೊತೆಗೂಡಿದ ಪಯಣದಲ್ಲಿ ಸುಂದರ ಮನಸುಗಳ ಭೇಟಿ ಮಾಡಿದ ಸಂಭ್ರಮವನ್ನು ಹಂಚಿಕೊಂಡೆವು.

ಸಂಪನ್ಮೂಲ ವ್ಯಕ್ತಿ ಶ್ರೀಧರ್ ಭಟ್ ಅವರು ಪ್ರಕೃತಿಯೊಡನೆ ಮಾನವನ ಸಂವಾದ, ಹಸಿರನ್ನು ಉಳಿಸುವಂತಹ ಅಗತ್ಯತೆಯ ಜೊತೆಗೆ ಅವಶ್ಯಕತೆಯ ಬಗ್ಗೆ ನೆರೆದವರೆಲ್ಲರಿಗೂ ಅರ್ಥೈಸಿಕೊಡುವ ಜೊತೆಗೆ ಸಮಿತಿಯ ಎಲ್ಲರನ್ನೂ ಪರಿಚಯಿಸಿಕೊಟ್ಟರು.

ಗಣಪತಿ ಭಟ್ ಕುಳಮರ್ವ, ಸುಭಾಷಿಣಿ, ಶ್ರೀಧರ ಭಟ್, ರಮೇಶ್ ಮಯ್ಯ, ರಾಮಕೃಷ್ಣ ಭಟ್ ಬದನಾಜೆ, ಅಶ್ವಿಜ ಶ್ರೀಧರ್, ತ್ರಿವಿಕ್ರಮ ಹೆಬ್ಬಾರ್, ಪ್ರಕಾಶ್ ನಾರಾಯಣ್, ಅಖಿಲಾ ಪ್ರಕಾಶ್ ಇವರೆಲ್ಲರ ಗುಂಪು ಭಜನಾ ಕಾರ್ಯಕ್ರಮದ ಮೂಲಕ ಕಾರ್ಯಕ್ರಮ ಆರಂಭಗೊಂಡಿತು.

ನವೀನ್ ನೆರಿಯ ಸ್ವಾಗತಿಸಿದರು. ಅಭಾಸಾಪ ಬೆಳ್ತಂಗಡಿ ತಾಲೂಕಿನ ಕಾರ್ಯದರ್ಶಿ ಸುಭಾಷಿಣಿ ಧನ್ಯವಾದವನ್ನಿತ್ತರು.

Related posts

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

Suddi Udaya

ಕೊಕ್ರಾಡಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಬಂಗಾಡಿ ಸರಕಾರಿ ಪ್ರೌಢಶಾಲೆಗೆ ಶೇ.98 ಫಲಿತಾಂಶ

Suddi Udaya

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ

Suddi Udaya
error: Content is protected !!