23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ‘ವಂದೇ ಪ್ರಕೃತಿ ಮಾತರಂ’ ಕಾರ್ಯಕ್ರಮ

ಬೆಳ್ತಂಗಡಿ: ಬಾಂಜಾರು ಮಲೆ ಪ್ರಕೃತಿಯ ಮಡಿಲಿನಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಯುಗಾದಿಯ ನಿಮಿತ್ತ ಎ5ರಂದು ‘ವಂದೇ ಪ್ರಕೃತಿ ಮಾತರಂ’ ಎಂಬ ವಿಷಯವಾಗಿ ಮೊದಲ ಕಾರ್ಯಕ್ರಮ ನಡೆಯಿತು.

ಅಭಾಸಾಪ ಬೆಳ್ತಂಗಡಿ ಅಧ್ಯಕ್ಷ ಗಣಪತಿ ಭಟ್ ಕುಳಮರ್ವ ಇವರ ಅಧ್ಯಕ್ಷತೆಯಲ್ಲಿ ಪ್ರಕೃತಿಯೊಡಗೂಡಿ ಸುತ್ತಮುತ್ತಲಿನ ಪರಿಸರ ವೀಕ್ಷಣೆಯ ಜೊತೆಗೆ ಗಣಪತಿ ದೇವಳದ ಕೆಲಸದ ಬಗ್ಗೆ ಮಾತುಕತೆಯ ಮೂಲಕ ಮಾಹಿತಿ ಸಂಗ್ರಹಿಸಲಾಯಿತು. ಕಠಿಣವಾದ ದಾರಿಯ ಜೊತೆಗೂಡಿದ ಪಯಣದಲ್ಲಿ ಸುಂದರ ಮನಸುಗಳ ಭೇಟಿ ಮಾಡಿದ ಸಂಭ್ರಮವನ್ನು ಹಂಚಿಕೊಂಡೆವು.

ಸಂಪನ್ಮೂಲ ವ್ಯಕ್ತಿ ಶ್ರೀಧರ್ ಭಟ್ ಅವರು ಪ್ರಕೃತಿಯೊಡನೆ ಮಾನವನ ಸಂವಾದ, ಹಸಿರನ್ನು ಉಳಿಸುವಂತಹ ಅಗತ್ಯತೆಯ ಜೊತೆಗೆ ಅವಶ್ಯಕತೆಯ ಬಗ್ಗೆ ನೆರೆದವರೆಲ್ಲರಿಗೂ ಅರ್ಥೈಸಿಕೊಡುವ ಜೊತೆಗೆ ಸಮಿತಿಯ ಎಲ್ಲರನ್ನೂ ಪರಿಚಯಿಸಿಕೊಟ್ಟರು.

ಗಣಪತಿ ಭಟ್ ಕುಳಮರ್ವ, ಸುಭಾಷಿಣಿ, ಶ್ರೀಧರ ಭಟ್, ರಮೇಶ್ ಮಯ್ಯ, ರಾಮಕೃಷ್ಣ ಭಟ್ ಬದನಾಜೆ, ಅಶ್ವಿಜ ಶ್ರೀಧರ್, ತ್ರಿವಿಕ್ರಮ ಹೆಬ್ಬಾರ್, ಪ್ರಕಾಶ್ ನಾರಾಯಣ್, ಅಖಿಲಾ ಪ್ರಕಾಶ್ ಇವರೆಲ್ಲರ ಗುಂಪು ಭಜನಾ ಕಾರ್ಯಕ್ರಮದ ಮೂಲಕ ಕಾರ್ಯಕ್ರಮ ಆರಂಭಗೊಂಡಿತು.

ನವೀನ್ ನೆರಿಯ ಸ್ವಾಗತಿಸಿದರು. ಅಭಾಸಾಪ ಬೆಳ್ತಂಗಡಿ ತಾಲೂಕಿನ ಕಾರ್ಯದರ್ಶಿ ಸುಭಾಷಿಣಿ ಧನ್ಯವಾದವನ್ನಿತ್ತರು.

Related posts

ಜಿಲ್ಲಾಧಿಕಾರಿ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಲೆಕುಡಿಯ ಸಮುದಾಯದ ಮುಖಂಡರ ಒತ್ತಾಯ

Suddi Udaya

ಮಚ್ಚಿನ ಕೃಷಿ ಇಲಾಖೆ ಆಶ್ರಯದಲ್ಲಿ ತಾಲೂಕು ಮಟ್ಟದ ಜಲಾನಯನ ಯಾತ್ರೆ-ಜಾಥಾ , ರಂಗೋಲಿ , ತೆಂಗಿನಕಾಯಿ ಸಿಪ್ಪೆ ಸುಲಿಯುವ ಸ್ಪರ್ಧೆ – ಪ್ರತಿಜ್ಞಾವಿಧಿ ಬೋಧನೆ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ ಸೈಂಟ್ ಮೇರಿಸ್ ಶಾಲಾ ಬೆಳ್ಳಿಹಬ್ಬ ಸಂಭ್ರಮಕ್ಕೆ ಚಾಲನೆ, ಲೋಗೋ ಬಿಡುಗಡೆ

Suddi Udaya
error: Content is protected !!