September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ‘ವಂದೇ ಪ್ರಕೃತಿ ಮಾತರಂ’ ಕಾರ್ಯಕ್ರಮ

ಬೆಳ್ತಂಗಡಿ: ಬಾಂಜಾರು ಮಲೆ ಪ್ರಕೃತಿಯ ಮಡಿಲಿನಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಯುಗಾದಿಯ ನಿಮಿತ್ತ ಎ5ರಂದು ‘ವಂದೇ ಪ್ರಕೃತಿ ಮಾತರಂ’ ಎಂಬ ವಿಷಯವಾಗಿ ಮೊದಲ ಕಾರ್ಯಕ್ರಮ ನಡೆಯಿತು.

ಅಭಾಸಾಪ ಬೆಳ್ತಂಗಡಿ ಅಧ್ಯಕ್ಷ ಗಣಪತಿ ಭಟ್ ಕುಳಮರ್ವ ಇವರ ಅಧ್ಯಕ್ಷತೆಯಲ್ಲಿ ಪ್ರಕೃತಿಯೊಡಗೂಡಿ ಸುತ್ತಮುತ್ತಲಿನ ಪರಿಸರ ವೀಕ್ಷಣೆಯ ಜೊತೆಗೆ ಗಣಪತಿ ದೇವಳದ ಕೆಲಸದ ಬಗ್ಗೆ ಮಾತುಕತೆಯ ಮೂಲಕ ಮಾಹಿತಿ ಸಂಗ್ರಹಿಸಲಾಯಿತು. ಕಠಿಣವಾದ ದಾರಿಯ ಜೊತೆಗೂಡಿದ ಪಯಣದಲ್ಲಿ ಸುಂದರ ಮನಸುಗಳ ಭೇಟಿ ಮಾಡಿದ ಸಂಭ್ರಮವನ್ನು ಹಂಚಿಕೊಂಡೆವು.

ಸಂಪನ್ಮೂಲ ವ್ಯಕ್ತಿ ಶ್ರೀಧರ್ ಭಟ್ ಅವರು ಪ್ರಕೃತಿಯೊಡನೆ ಮಾನವನ ಸಂವಾದ, ಹಸಿರನ್ನು ಉಳಿಸುವಂತಹ ಅಗತ್ಯತೆಯ ಜೊತೆಗೆ ಅವಶ್ಯಕತೆಯ ಬಗ್ಗೆ ನೆರೆದವರೆಲ್ಲರಿಗೂ ಅರ್ಥೈಸಿಕೊಡುವ ಜೊತೆಗೆ ಸಮಿತಿಯ ಎಲ್ಲರನ್ನೂ ಪರಿಚಯಿಸಿಕೊಟ್ಟರು.

ಗಣಪತಿ ಭಟ್ ಕುಳಮರ್ವ, ಸುಭಾಷಿಣಿ, ಶ್ರೀಧರ ಭಟ್, ರಮೇಶ್ ಮಯ್ಯ, ರಾಮಕೃಷ್ಣ ಭಟ್ ಬದನಾಜೆ, ಅಶ್ವಿಜ ಶ್ರೀಧರ್, ತ್ರಿವಿಕ್ರಮ ಹೆಬ್ಬಾರ್, ಪ್ರಕಾಶ್ ನಾರಾಯಣ್, ಅಖಿಲಾ ಪ್ರಕಾಶ್ ಇವರೆಲ್ಲರ ಗುಂಪು ಭಜನಾ ಕಾರ್ಯಕ್ರಮದ ಮೂಲಕ ಕಾರ್ಯಕ್ರಮ ಆರಂಭಗೊಂಡಿತು.

ನವೀನ್ ನೆರಿಯ ಸ್ವಾಗತಿಸಿದರು. ಅಭಾಸಾಪ ಬೆಳ್ತಂಗಡಿ ತಾಲೂಕಿನ ಕಾರ್ಯದರ್ಶಿ ಸುಭಾಷಿಣಿ ಧನ್ಯವಾದವನ್ನಿತ್ತರು.

Related posts

ಮೇ 1 : ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: ಚಲನಚಿತ್ರ ನಟ ದೊಡ್ಡಣ್ಣ ಭಾಗಿ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

Suddi Udaya

ಬೆಳ್ತಂಗಡಿಯ 5 ಮಂದಿ ಕೃಷಿಕರಿಗೆ ಅತ್ಯುತ್ತಮ ಸಾವಯವ ಪ್ರೋತ್ಸಾಹ ರೈತ ಪ್ರಶಸ್ತಿ

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೆ

Suddi Udaya

ಉಜಿರೆ: ಜಿ.ಪಂ ಮಾಜಿ ಸದಸ್ಯ ತುಂಗಪ್ಪ ಗೌಡ ಮರಕಡ ನಿಧನ

Suddi Udaya

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

Suddi Udaya
error: Content is protected !!