September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

ಕೊಕ್ಕಡ: ಕೊಕ್ಕಡ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಎ.6ರಂದು ಕೆಎಸ್ಆರ್‌ಟಿಸಿ ಬಸ್ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಗಾಯಗೊಂಡ ಘಟನೆ ವರದಿಯಾಗಿದೆ.

ಧರ್ಮಸ್ಥಳದಿಂದ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಹಾಗೂ ಬೆಂಗಳೂರಿನಿಂದ ಧರ್ಮಸ್ಥಳದ ಕಡೆಗೆ ಬರುತ್ತಿದ್ದ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದು, ಈ ಪೈಕಿ ಕವಿತಾ ಎಂಬ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಕವಿತಾ ಅವರನ್ನು ತಕ್ಷಣವೇ ಕೊಕ್ಕಡದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಸಚಿವ ದಿನೇಶ್ ಗುಂಡೂರಾವ್‌ ಅವರ ಟಿಪ್ಪಣಿ ಆಧರಿಸಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವುದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

Suddi Udaya

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಿವಗಿರಿ ಯಾತ್ರೆ, ಹಲವಾರು ಕ್ಷೇತ್ರ ದರ್ಶನ

Suddi Udaya

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ತರಬೇತಿ ಕಾರ್ಯಾಗಾರ

Suddi Udaya

ಮೊಗ್ರು ಊoತನಾಜೆ ಲಕ್ಷ್ಮೀ ನಾರಾಯಣ ಭಜನಾ ಮಂದಿರದಲ್ಲಿ ಕಣಿಯೂರು ವಲಯ ಮೊಗ್ರು ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!