September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಧರ್ಮ ಸ್ಥಳ ಎಸ್‌ಡಿಎಂ ಆಂ.ಮಾ. ಶಾಲಾ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ವಿದಾಯ ಕೂಟ

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ವಿದಾಯ ಕೂಟ ಸಮಾರಂಭ ನಡೆಯಿತು.

ಮುಖ್ಯ ಅತಿಥಿ ಶಾಲಾ ಸಂಚಾಲಕ ಅನಂತಪದ್ಮನಾಭ ಭಟ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಕಷ್ಟಗಳು ಬಂದಾಗ ಹೆದರದೆ ಧೈರ್ಯದಿಂದ ಮುನ್ನಡೆಯಿರಿ, ಶ್ರಮಕ್ಕೆ ತಕ್ಕದಾದ ಪ್ರತಿಫಲ ಇದ್ದೇ ಇರುತ್ತದೆ, ಮುಂದಿನ ದಾರಿಯಲ್ಲಿ ನಾಜೂಕಾದ ಪಯಣವನ್ನು ಮುನ್ನಡೆಸಿ, ಸತ್ಪ್ರಜೆಗಳಾಗಿ ಬಾಳಿ ಮನೆಗೆ ಶಾಲೆಗೆ ಹಾಗೂ ದೇಶಕ್ಕೆ ಕೀರ್ತಿ ತರುವ ಕೆಲಸವನ್ನು ಮಾಡಿ ಎಂದು ಶುಭ ಹಾರೈಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ ವಿ ಮಾತನಾಡಿ ದೊಡ್ಡದಾದ ಕನಸು ಕಾಣಿ, ಪ್ರಾಮಾಣಿಕ ಪ್ರಯತ್ನ ಮಾಡಿ ಹಾಗೆ ಮಾಡಿದಾಗ ಯಶಸ್ಸು ನಿಮ್ಮನ್ನು ಹುಡುಕಿ ಬರುತ್ತದೆ.ಮೌಲ್ಯಗಳ ಬೆಳಕಿನಲ್ಲಿ ಹೆಜ್ಜೆ ಇಡಿ ಎಂದು ನುಡಿದು ಶುಭ ಹಾರೈಸಿದರು.

ವಿದ್ಯಾರ್ಥಿಗಳ ಇಷ್ಟು ವರ್ಷಗಳ ವಿದ್ಯಾರ್ಥಿ ಜೀವನ ಕ್ಯಾಮರಾ ಕಣ್ಣಲ್ಲಿ ಕಂಡಂತೆ, ಭಾವಚಿತ್ರಗಳ ಕಿರು ವಿಡಿಯೋ ಪ್ರದರ್ಶಿಸಲಾಯಿತು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಾದವರಿಗೆ ಬಹುಮಾನವನ್ನು ನೀಡಿ ಪ್ರೋತ್ಸಾಹಿಸಲಾಯಿತು.

ಶಿಕ್ಷಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.ವಿದ್ಯಾರ್ಥಿಗಳು ನೆನಪಿನ ಕಾಣಿಕೆಯನ್ನು ನೀಡಿದರು. ವಿದ್ಯಾರ್ಥಿಗಳಿಗೆ ಶಾಲಾ ವತಿಯಿಂದ ನೆನಪಿನ ಕಾಣಿಕೆಯನ್ನು ನೀಡಲಾಯಿತು. ಶಾಲಾ ಶಿಕ್ಷಕರಿಂದ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿದಾಯ ಗೀತೆಗಳನ್ನು ಹಾಡಿ ಶುಭ ಹಾರೈಸಿದರು.

ಸಹಶಿಕ್ಷಕಯರಾದ ಸತ್ಯವತಿ ನಿರೂಪಿಸಿ, ರಮಾ ರಾಜೇಶ್ ವಂದಿಸಿದರು.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು, ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ: ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು: ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ.

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

Suddi Udaya

ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya
error: Content is protected !!