22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

ಬೆಳ್ತಂಗಡಿ: ಭಾರತದ ಜನಗಣತಿಯ ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿ'ಪ್ರಕ್ರಿಯೆಯು ಏಪ್ರಿಲ್ 1 ರಿಂದ ಅಧಿಕೃತವಾಗಿ ಆರಂಭಗೊಂಡಿದೆ. ಈ ಬಾರಿ ಸಾರ್ವಜನಿಕರಿಗೆ ತಮ್ಮ ವಿವರಗಳನ್ನು ತಾವೇ ಆನ್‌ಲೈನ್ ಮೂಲಕ ದಾಖಲಿಸಲು 'ಸ್ವಯಂ ಗಣತಿ' ಎಂಬ ವಿಶೇಷ ಅವಕಾಶ ಕಲ್ಪಿಸಲಾಗಿದೆ. ಕಂದಾಯ ಇಲಾಖೆ ಆದೇಶದಂತೆ, ಏ.೧ರಿಂದ ೧೫ರವರೆಗೆ ಸಾರ್ವಜನಿಕರು ಸ್ವಯಂ ಗಣತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಭಾರತ ಸರ್ಕಾರದ ಅಧಿಕೃತ ವೆಬ್ ಪೋರ್ಟಲ್ https://se.census.gov.in ಮೂಲಕ ಸಾರ್ವಜನಿಕರು ನೇರವಾಗಿ ಮನೆಯ ವಿವರಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ. ಮನೆಯ ಒಬ್ಬ ಸದಸ್ಯರು ಸುಮಾರು 15 ರಿಂದ 20 ನಿಮಿಷಗಳಲ್ಲಿ ಕುಟುಂಬದ ವಿವರಗಳನ್ನು ಪೋರ್ಟಲ್‌ನಲ್ಲಿ ಭರ್ತಿ ಮಾಡಬಹುದು. ವಿವರಗಳನ್ನು ಸಲ್ಲಿಸಿದ ನಂತರ, ಅರ್ಜಿದಾರರ ಮೊಬೈಲ್ ಅಥವಾ ಇ-ಮೇಲ್‌ಗೆ ಸ್ವಯಂ ಗಣತಿ ಐಡಿ’ ಬರಲಿದೆ. ಮುಂದೆ ಗಣತಿದಾರರು ಮನೆಗೆ ಭೇಟಿ ನೀಡಿದಾಗ, ಈ ಐಡಿ ನೀಡಿ ಮಾಹಿತಿ ದೃಢೀಕರಿಸಬೇಕಾಗುತ್ತದೆ.

ಜಾಗೃತಿ ಮೂಡಿಸಲು ಸೂಚನೆ: ಪ್ರಕ್ರಿಯೆ ಸುಗಮ ಗೊಳಿಸಲು ಸರ್ಕಾರವು ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು, ಇಲಾಖಾ ಮುಖ್ಯಸ್ಥರಿಗೆ ಸೂಚನೆ ನೀಡಿದೆ. ಸರ್ಕಾರಿ ನೌಕರರು ಮಾತ್ರವಲ್ಲದೆ, ಸಾಮಾನ್ಯ ನಾಗರಿಕರಿಗೂ ಈ ಬಗ್ಗೆ ಅರಿವು ಮೂಡಿಸಲು ಮತ್ತು ಗರಿಷ್ಠ ಸಂಖ್ಯೆಯಲ್ಲಿ ಜನರು ಸ್ವಯಂ ಗಣತಿಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಲು ಆದೇಶಿಸಲಾಗಿದೆ.

Related posts

ಮೊಗ್ರು: ಯುವ ಕೃಷಿಕ ದೇವಿಪ್ರಸಾದ್ ಗೌಡ ಕಡಮ್ಮಾಜೆ ರವರಿಗೆ “ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿ”

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು (ಮಾಸ್ ಲಿಮಿಟೆಡ್) ಇವರಿಂದ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಸಹಯೋಗದಲ್ಲಿ ಗುರುವಾಯನಕೆರೆಯಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಡಿ.4-5: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭ ಸ್ಥಾಪನೆ ಮತ್ತು ಶೋಭಾಯಾತ್ರೆ

Suddi Udaya

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಕೊಯ್ಯೂರು: ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಸೇರ್ಪಡೆ

Suddi Udaya
error: Content is protected !!