23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

ಬೆಳ್ತಂಗಡಿ: ಭಾರತದ ಜನಗಣತಿಯ ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿ'ಪ್ರಕ್ರಿಯೆಯು ಏಪ್ರಿಲ್ 1 ರಿಂದ ಅಧಿಕೃತವಾಗಿ ಆರಂಭಗೊಂಡಿದೆ. ಈ ಬಾರಿ ಸಾರ್ವಜನಿಕರಿಗೆ ತಮ್ಮ ವಿವರಗಳನ್ನು ತಾವೇ ಆನ್‌ಲೈನ್ ಮೂಲಕ ದಾಖಲಿಸಲು 'ಸ್ವಯಂ ಗಣತಿ' ಎಂಬ ವಿಶೇಷ ಅವಕಾಶ ಕಲ್ಪಿಸಲಾಗಿದೆ. ಕಂದಾಯ ಇಲಾಖೆ ಆದೇಶದಂತೆ, ಏ.೧ರಿಂದ ೧೫ರವರೆಗೆ ಸಾರ್ವಜನಿಕರು ಸ್ವಯಂ ಗಣತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಭಾರತ ಸರ್ಕಾರದ ಅಧಿಕೃತ ವೆಬ್ ಪೋರ್ಟಲ್ https://se.census.gov.in ಮೂಲಕ ಸಾರ್ವಜನಿಕರು ನೇರವಾಗಿ ಮನೆಯ ವಿವರಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ. ಮನೆಯ ಒಬ್ಬ ಸದಸ್ಯರು ಸುಮಾರು 15 ರಿಂದ 20 ನಿಮಿಷಗಳಲ್ಲಿ ಕುಟುಂಬದ ವಿವರಗಳನ್ನು ಪೋರ್ಟಲ್‌ನಲ್ಲಿ ಭರ್ತಿ ಮಾಡಬಹುದು. ವಿವರಗಳನ್ನು ಸಲ್ಲಿಸಿದ ನಂತರ, ಅರ್ಜಿದಾರರ ಮೊಬೈಲ್ ಅಥವಾ ಇ-ಮೇಲ್‌ಗೆ ಸ್ವಯಂ ಗಣತಿ ಐಡಿ’ ಬರಲಿದೆ. ಮುಂದೆ ಗಣತಿದಾರರು ಮನೆಗೆ ಭೇಟಿ ನೀಡಿದಾಗ, ಈ ಐಡಿ ನೀಡಿ ಮಾಹಿತಿ ದೃಢೀಕರಿಸಬೇಕಾಗುತ್ತದೆ.

ಜಾಗೃತಿ ಮೂಡಿಸಲು ಸೂಚನೆ: ಪ್ರಕ್ರಿಯೆ ಸುಗಮ ಗೊಳಿಸಲು ಸರ್ಕಾರವು ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು, ಇಲಾಖಾ ಮುಖ್ಯಸ್ಥರಿಗೆ ಸೂಚನೆ ನೀಡಿದೆ. ಸರ್ಕಾರಿ ನೌಕರರು ಮಾತ್ರವಲ್ಲದೆ, ಸಾಮಾನ್ಯ ನಾಗರಿಕರಿಗೂ ಈ ಬಗ್ಗೆ ಅರಿವು ಮೂಡಿಸಲು ಮತ್ತು ಗರಿಷ್ಠ ಸಂಖ್ಯೆಯಲ್ಲಿ ಜನರು ಸ್ವಯಂ ಗಣತಿಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಲು ಆದೇಶಿಸಲಾಗಿದೆ.

Related posts

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

Suddi Udaya

ಬಳಂಜ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya
error: Content is protected !!