September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

ಬೆಳ್ತಂಗಡಿ: ಭಾರತದ ಜನಗಣತಿಯ ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿ'ಪ್ರಕ್ರಿಯೆಯು ಏಪ್ರಿಲ್ 1 ರಿಂದ ಅಧಿಕೃತವಾಗಿ ಆರಂಭಗೊಂಡಿದೆ. ಈ ಬಾರಿ ಸಾರ್ವಜನಿಕರಿಗೆ ತಮ್ಮ ವಿವರಗಳನ್ನು ತಾವೇ ಆನ್‌ಲೈನ್ ಮೂಲಕ ದಾಖಲಿಸಲು 'ಸ್ವಯಂ ಗಣತಿ' ಎಂಬ ವಿಶೇಷ ಅವಕಾಶ ಕಲ್ಪಿಸಲಾಗಿದೆ. ಕಂದಾಯ ಇಲಾಖೆ ಆದೇಶದಂತೆ, ಏ.೧ರಿಂದ ೧೫ರವರೆಗೆ ಸಾರ್ವಜನಿಕರು ಸ್ವಯಂ ಗಣತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಭಾರತ ಸರ್ಕಾರದ ಅಧಿಕೃತ ವೆಬ್ ಪೋರ್ಟಲ್ https://se.census.gov.in ಮೂಲಕ ಸಾರ್ವಜನಿಕರು ನೇರವಾಗಿ ಮನೆಯ ವಿವರಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ. ಮನೆಯ ಒಬ್ಬ ಸದಸ್ಯರು ಸುಮಾರು 15 ರಿಂದ 20 ನಿಮಿಷಗಳಲ್ಲಿ ಕುಟುಂಬದ ವಿವರಗಳನ್ನು ಪೋರ್ಟಲ್‌ನಲ್ಲಿ ಭರ್ತಿ ಮಾಡಬಹುದು. ವಿವರಗಳನ್ನು ಸಲ್ಲಿಸಿದ ನಂತರ, ಅರ್ಜಿದಾರರ ಮೊಬೈಲ್ ಅಥವಾ ಇ-ಮೇಲ್‌ಗೆ ಸ್ವಯಂ ಗಣತಿ ಐಡಿ’ ಬರಲಿದೆ. ಮುಂದೆ ಗಣತಿದಾರರು ಮನೆಗೆ ಭೇಟಿ ನೀಡಿದಾಗ, ಈ ಐಡಿ ನೀಡಿ ಮಾಹಿತಿ ದೃಢೀಕರಿಸಬೇಕಾಗುತ್ತದೆ.

ಜಾಗೃತಿ ಮೂಡಿಸಲು ಸೂಚನೆ: ಪ್ರಕ್ರಿಯೆ ಸುಗಮ ಗೊಳಿಸಲು ಸರ್ಕಾರವು ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು, ಇಲಾಖಾ ಮುಖ್ಯಸ್ಥರಿಗೆ ಸೂಚನೆ ನೀಡಿದೆ. ಸರ್ಕಾರಿ ನೌಕರರು ಮಾತ್ರವಲ್ಲದೆ, ಸಾಮಾನ್ಯ ನಾಗರಿಕರಿಗೂ ಈ ಬಗ್ಗೆ ಅರಿವು ಮೂಡಿಸಲು ಮತ್ತು ಗರಿಷ್ಠ ಸಂಖ್ಯೆಯಲ್ಲಿ ಜನರು ಸ್ವಯಂ ಗಣತಿಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಲು ಆದೇಶಿಸಲಾಗಿದೆ.

Related posts

ಜೂ. 6: ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣಾ ಸಮಿತಿ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಆಶ್ರಯದಲ್ಲಿ ಕ್ರಾಂತಿವೀರ ಉಬಾರ್ ಮಂಜ ಬೈದ್ಯ ಪುಸ್ತಕ ಬಿಡುಗಡೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನೆರಿಯ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya

ಅಗಲಿದ ಹಿರಿಯ ಸಾಹಿತಿ ಕೆ. ಟಿ. ಗಟ್ಟಿಯವರಿಗೆ ಉಜಿರೆಯಲ್ಲಿ ಶ್ರದ್ಧಾಂಜಲಿ

Suddi Udaya

ಓಡಿಲ್ನಾಳ ಸ. ಉ. ಪ್ರಾಥಮಿಕ ಶಾಲಾ ಮಕ್ಕಳಿಗೆ ಮುಳಿಯ ಜ್ಯುವೆಲ್ಲರ್ಸ್ ಹಾಗೂ ದಾನಿಗಳಿಂದ ಬ್ಯಾಗ್, ಸಮವಸ್ತ್ರ ವಿತರಣೆ

Suddi Udaya

ಮರಿಯಾಂಬಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!