23.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಾಧಕರು

ಗೇರುಕಟ್ಟೆ ದಿವಾಕರ ಆಚಾರ್ಯ ರವರಿಗೆ ಯಕ್ಷಗಾನದಲ್ಲಿ ಡಿಪ್ಲೊಮಾ ಪದವಿ ಪ್ರದಾನ

ಬೆಳ್ತಂಗಡಿ: ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಸಂಯೋಜಿತವಾಗಿ ಬೆಂಗಳೂರಿನ ಕಲಾ ಕದಂಬ ಆರ್ಟ್ ಸೆಂಟರ್ ಮೂಲಕ 2024-25ನೇ ಸಾಲಿನ ಯಕ್ಷಗಾನ ಸರ್ಟಿಫಿಕೇಟ್ ಮತ್ತು ಡಿಪ್ಲೊಮಾ ಪದವಿಯ ಎರಡು ಸೆಮಿಸ್ಟರ್‌ಗಳ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪದವಿ ಪ್ರದಾನ ಸಮಾರಂಭವು ವಿಶ್ವವಿದ್ಯಾಲಯದ ನಿಕಟಪೂರ್ವ ಕುಲಪತಿಗಳಾದ ಪ್ರೊ. ನಾಗೇಶ ವಿ. ಬೆಟ್ಟಕೋಟೆ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಬಿ.ಎಂ.ಶ್ರೀ ಕಲಾಭವನದಲ್ಲಿ ಜರಗಿತು.

ವಿ.ವಿ ಕುಲಪತಿಗಳಾದ ಡಾ.ಕೆ.ರಾಮಕೃಷ್ಣಯ್ಯ ಅವರು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ದಿವಾಕರ ಆಚಾರ್ಯ ಗೇರುಕಟ್ಟೆ ಇವರಿಗೆ ಪದವಿ ಪ್ರದಾನ ಮಾಡಿದರು.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾಗಿರುವ ಇವರು ಹವ್ಯಾಸಿ ಕಲಾವಿದ, ಸಂಘಟಕರಾಗಿದ್ದು ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಉಪ್ಪಿನಂಗಡಿ ಇದರ ಅಧ್ಯಕ್ಷ, ಯಕ್ಷ ಭಾರತಿ ಬೆಳ್ತಂಗಡಿ ಇದರ ಕಾರ್ಯದರ್ಶಿಯಾಗಿದ್ದು, ದ.ಕ ಜಿಲ್ಲೆಯಲ್ಲಿ ಯಕ್ಷಗಾನ ಡಿಪ್ಲೋಮಾ ಪದವಿಯನ್ನು ಪಡೆದ ಮೊದಲಿಗರಾಗಿದ್ದಾರೆ.

ಪದವಿ ಪ್ರದಾನ ಸಮಾರಂಭದಲ್ಲಿ ಬಿ.ಎಂ. ಶ್ರೀ ಪ್ರತಿಷ್ಠಾನದ ಗೌರವಾಧ್ಯಕ್ಷ ಡಾ.ಆರ್. ಲಕ್ಷ್ಮೀನಾರಾಯಣ, ಯಕ್ಷಗಾನ ವಿದ್ವಾಂಸರಾದ ಆನಂದ ರಾಮ ಉಪಾಧ್ಯ, ಫಣಿಗಿರಿ ಪ್ರತಿಷ್ಠಾನದ ಉಮೇಶ ಶಿರೂರು, ಕಲಾಕದಂಬ ಆರ್ಟ್ ಸೆಂಟರ್ ನಿರ್ದೇಶಕ ಡಾ. ರಾಧಾಕೃಷ್ಣ ಉರಾಳ, ಕಾರ್ಯದರ್ಶಿ ಮುರಳೀಧರ ನಾವಡ ಉಪಸ್ಥಿತರಿದ್ದರು.

Related posts

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ತೇಜಸ್ವಿನಿ ಪೂಜಾರಿಯವರಿಗೆ ಸನ್ಮಾನ

Suddi Udaya

ತಾಲೂಕಿನ ನಾಲ್ವರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya

ಅತ್ಯುನ್ನತ ಸೇವೆಗಾಗಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪಡೆದ ವಿಜಯ ಕುಮಾರ್ ಕೆಲ್ಲಗುತ್ತು ರವರಿಗೆ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಅಲೋಕ್ ಮೋಹನ್ ರಿಂದ ಸ್ಮರಣಿಕೆ ನೀಡಿ ಗೌರವ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya
error: Content is protected !!