22.6 C
ಪುತ್ತೂರು, ಬೆಳ್ತಂಗಡಿ
July 23, 2026
ಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ: ವಿಶ್ವ ಆರೋಗ್ಯ ದಿನದ ಅಂಗವಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ ಇಲ್ಲಿನ ಐಕ್ಯೂಎಸಿ, ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೊವರ್ಸ್-ರೇಂಜರ್ಸ್ ಘಟಕಗಳ ಸಹಯೋಗದಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಎ.೭ರಂದು ಆನ್ ಲೈನ್‌ನಲ್ಲಿ ಕಾಲೇಜು ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಪ್ರಖ್ಯಾತ ಮಾನಸಿಕ ತಜ್ಞರಾದ ಡಾ. ಸಿ.ಆರ್. ಚಂದ್ರಶೇಖರ್‌ರವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಅಧ್ಯಾಪಕಿಗೆ ಮತ್ತು ಯುವಜನರಿಗೆ ಮಾನಸಿಕ ಆರೋಗ್ಯದ ಬಗ್ಗೆ ಅದರಲ್ಲೂ ವಿದ್ಯಾರ್ಥಿಗಳು ಪ್ರಸಕ್ತ ಪರಿಸ್ಥಿತಿಯಲ್ಲಿ ಎದುರಿಸುತ್ತಿರುವ ಮಾನಸಿಕ ಸಮಸ್ಯೆಗಳ ಬಗ್ಗೆ ಸವಿವರವಾಗಿ ತಿಳಿಸಿದರು. ವಿದ್ಯಾರ್ಥಿಗಳು ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಗೆ ಒಳಗಾಗುತ್ತಿರುವುದು ಅತ್ಯಂತ ನೋವಿನ ಸಂಗತಿ ಆಗಿದೆ. ಹಾಗಾಗಿ ಅಧ್ಯಾಪಕರು ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಮಾಡಬೇಕು . ಅವರೊಂದಿಗೆ ಆತ್ಮೀಯವಾಗಿ ಮಾತಾನಾಡಿಸುವ ಮೂಲಕ ಖಿನ್ನತೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳನ್ನು ಅದರಿಂದ ಹೊರಗೆ ತರಬೇಕು ಎಂದು ತಿಳಿಸಿದರು. ಸಮಾಜದಲ್ಲಿ ಪ್ರಸ್ತುತ ವಿದ್ಯಾಮಾನದಲ್ಲಿ ನಡೆಯುತ್ತಿರುವ ಜಾತಿ ವ್ಯವಸ್ಥೆ, ಭಷ್ಟಾಚಾರ, ಮೇಲು ಕೀಳು, ವ್ಯವಸ್ಥೆಗಳು ವಿದ್ಯಾರ್ಥಿಗಳಲ್ಲಿ ಖಿನ್ನತೆಯನ್ನು ಉಂಟುಮಾಡುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ., ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಗಳಾದ ಪ್ರೊ. ರೊನಾಲ್ಡ್ ಪ್ರವೀಣ್ ಕೊರಾಯ, ಯುವ ರೆಡ್ ಕ್ರಾಸ್ ಅಧಿಕಾರಿ ಹಾಗೂ ರೊವರ್ ಸ್ಕೌಟ್ ಲೀಡರ್ ಡಾ.ರವಿ ಎಂ.ಎನ್., ಕಾರ್ಯಕ್ರಮ ಸಂಯೋಜಕಾರದ ಡಾ. ದಿವ್ಯಪ್ರಭು ಮತ್ತು ಕಾಲೇಜಿನ ಎಲ್ಲಾ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು..

Related posts

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಶುಭರಾಜ್ ಬಂಧನ

Suddi Udaya

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಡಿ.2 : ಗುರುವಾಯನಕೆರೆ ಶ್ರೀ ಪಿಲಿಚಾಮುಂಡಿ ದೈವದ “ದೊಂಪದಬಲಿ ಉತ್ಸವ”: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ: ಅಧ್ಯಕ್ಷರಾಗಿ ಶಶಿಧರ ಶೆಟ್ಟಿ , ಸಂಚಾಲಕರಾಗಿ ಶಾಸಕ ಹರೀಶ್ ಪೂಂಜ

Suddi Udaya

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

Suddi Udaya
error: Content is protected !!