September 6, 2026
ತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕ ಅಸ್ಥಿತ್ವಕ್ಕೆ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ ಮಂಗಳೂರು ಗ್ರಾಮಾಂತರ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಬಾಜಾರುವಿನಲ್ಲಿ ನೂತನ ಎಸ್‌ಡಿಟಿಯು ಆಟೋ ಯೂನಿಯನ್ ರಚನೆ ಮಾಡಲಾಯಿತು.

ವೀಕ್ಷಕರರಾಗಿ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಸಲೀಮ್ ಜಿ.ಕೆ. ರವರು ಎಸ್‌ಡಿಟಿಯು ಆಟೋ ಯೂನಿಯನ್‌ನ ಬಗ್ಗೆ ಹಾಗೂ ಅದರ ಮಹತ್ವವನ್ನು ವಿವರಿಸಿದರು.
ನಂತರ ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕದ ಎಲ್ಲಾ ಸದಸ್ಯರಲ್ಲಿ ಚರ್ಚಿಸಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಅಬ್ದುಲ್ ರಝಾಕ್, ಉಪಾಧ್ಯಕ್ಷರಾಗಿ ಬಾತಿಷ್ ಬಾಜಾರ್, ಕಾರ್ಯದರ್ಶಿಯಾಗಿ ಮಹಮ್ಮದ್ ಕೆ, ಜತೆ ಕಾರ್ಯದರ್ಶಿಯಾಗಿ ಸುಧರ್ಶನ್ ಬಾಜಾರ್, ಕೋಶಾಧಿಕಾರಿಯಾಗಿ ಇಬ್ರಾಹಿಂ ಕುಟ್ಟಿಕ್ಕಳ, ಸಲಹೆಗಾರರಾಗಿ ರಶೀದ್ ಬದಿಬಿತ್ತಿಲು ರವರನ್ನು ಆಯ್ಕೆ ಮಾಡಲಾಯಿತು.
ಒಟ್ಟು 20 ಮಂದಿ ಆಟೋ ಚಾಲಕ ಮಾಲಕರು ಈ ಸಂಧರ್ಭದಲ್ಲಿ ಎಸ್‌ಡಿಟಿಯು ಆಟೋ ಯೂನಿಯನ್‌ನ ಸದಸ್ಯತ್ವವನ್ನು ಸ್ವೀಕರಿಸಿದರು.

ಅಬ್ದುಲ್ ರಝಾಕ್ ಸ್ವಾಗತಿಸಿ, ಮುಹಮ್ಮದ್ ಕೆ. ಧನ್ಯವಾದ ಗೈದರು.

Related posts

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಇದರ ಆಶ್ರಯದಲ್ಲಿ ತಾ| ಮಟ್ಟದ ವಾಲಿಬಾಲ್ ಪಂದ್ಯಾಟ, ಹಗ್ಗಜಗ್ಗಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಯವರ 106ನೇ ಜಯಂತಿ ಆಚರಣೆ

Suddi Udaya

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya
error: Content is protected !!