July 23, 2026
ಸಾಧಕರು

ಗೇರುಕಟ್ಟೆ ದಿವಾಕರ ಆಚಾರ್ಯ ರವರಿಗೆ ಯಕ್ಷಗಾನದಲ್ಲಿ ಡಿಪ್ಲೊಮಾ ಪದವಿ ಪ್ರದಾನ

ಬೆಳ್ತಂಗಡಿ: ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಸಂಯೋಜಿತವಾಗಿ ಬೆಂಗಳೂರಿನ ಕಲಾ ಕದಂಬ ಆರ್ಟ್ ಸೆಂಟರ್ ಮೂಲಕ 2024-25ನೇ ಸಾಲಿನ ಯಕ್ಷಗಾನ ಸರ್ಟಿಫಿಕೇಟ್ ಮತ್ತು ಡಿಪ್ಲೊಮಾ ಪದವಿಯ ಎರಡು ಸೆಮಿಸ್ಟರ್‌ಗಳ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪದವಿ ಪ್ರದಾನ ಸಮಾರಂಭವು ವಿಶ್ವವಿದ್ಯಾಲಯದ ನಿಕಟಪೂರ್ವ ಕುಲಪತಿಗಳಾದ ಪ್ರೊ. ನಾಗೇಶ ವಿ. ಬೆಟ್ಟಕೋಟೆ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಬಿ.ಎಂ.ಶ್ರೀ ಕಲಾಭವನದಲ್ಲಿ ಜರಗಿತು.

ವಿ.ವಿ ಕುಲಪತಿಗಳಾದ ಡಾ.ಕೆ.ರಾಮಕೃಷ್ಣಯ್ಯ ಅವರು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ದಿವಾಕರ ಆಚಾರ್ಯ ಗೇರುಕಟ್ಟೆ ಇವರಿಗೆ ಪದವಿ ಪ್ರದಾನ ಮಾಡಿದರು.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾಗಿರುವ ಇವರು ಹವ್ಯಾಸಿ ಕಲಾವಿದ, ಸಂಘಟಕರಾಗಿದ್ದು ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಉಪ್ಪಿನಂಗಡಿ ಇದರ ಅಧ್ಯಕ್ಷ, ಯಕ್ಷ ಭಾರತಿ ಬೆಳ್ತಂಗಡಿ ಇದರ ಕಾರ್ಯದರ್ಶಿಯಾಗಿದ್ದು, ದ.ಕ ಜಿಲ್ಲೆಯಲ್ಲಿ ಯಕ್ಷಗಾನ ಡಿಪ್ಲೋಮಾ ಪದವಿಯನ್ನು ಪಡೆದ ಮೊದಲಿಗರಾಗಿದ್ದಾರೆ.

ಪದವಿ ಪ್ರದಾನ ಸಮಾರಂಭದಲ್ಲಿ ಬಿ.ಎಂ. ಶ್ರೀ ಪ್ರತಿಷ್ಠಾನದ ಗೌರವಾಧ್ಯಕ್ಷ ಡಾ.ಆರ್. ಲಕ್ಷ್ಮೀನಾರಾಯಣ, ಯಕ್ಷಗಾನ ವಿದ್ವಾಂಸರಾದ ಆನಂದ ರಾಮ ಉಪಾಧ್ಯ, ಫಣಿಗಿರಿ ಪ್ರತಿಷ್ಠಾನದ ಉಮೇಶ ಶಿರೂರು, ಕಲಾಕದಂಬ ಆರ್ಟ್ ಸೆಂಟರ್ ನಿರ್ದೇಶಕ ಡಾ. ರಾಧಾಕೃಷ್ಣ ಉರಾಳ, ಕಾರ್ಯದರ್ಶಿ ಮುರಳೀಧರ ನಾವಡ ಉಪಸ್ಥಿತರಿದ್ದರು.

Related posts

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ಅರ್ವ ನೇಮಕ

Suddi Udaya

ಜೀವ ದೇವತಾಶಾಸ್ತ್ರ ಮುಕ್ತ ವಿಶ್ವವಿದ್ಯಾಲಯದಿಂದ ಎಂ. ನಾರಾಯಣ್ ಬೇಗೂರು ರವರಿಗೆ ಸಮಾಜ ಸೇವೆಗಾಗಿ (“ಡಾಕ್ಟರ್ ಆಫ್ ಹ್ಯುಮಾನಿಟಿ”) ಡಾಕ್ಟರೇಟ್ ಗೌರವ ಪುರಸ್ಕಾರ

Suddi Udaya

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

Suddi Udaya

ಶ್ರೀ ಧಮ೯ಸ್ಥಳ ಭಜನಾ ಪರಿಷತ್ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸಿದ್ದ, ಜಯರಾಮ ನೆಲ್ಲಿತ್ತಾಯರಿಗೆ “ಸಮಾಜ ಭೂಷಣ”ಪ್ರಶಸ್ತಿ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ನಿಡ್ಲೆ ಆಗ್ರಿಲೀಫ್‌ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ‌ ಆವಿನಾಶ್‌ ರಾವ್‌ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya
error: Content is protected !!