23.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ: ವಿಶ್ವ ಆರೋಗ್ಯ ದಿನದ ಅಂಗವಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ ಇಲ್ಲಿನ ಐಕ್ಯೂಎಸಿ, ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೊವರ್ಸ್-ರೇಂಜರ್ಸ್ ಘಟಕಗಳ ಸಹಯೋಗದಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಎ.೭ರಂದು ಆನ್ ಲೈನ್‌ನಲ್ಲಿ ಕಾಲೇಜು ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಪ್ರಖ್ಯಾತ ಮಾನಸಿಕ ತಜ್ಞರಾದ ಡಾ. ಸಿ.ಆರ್. ಚಂದ್ರಶೇಖರ್‌ರವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಅಧ್ಯಾಪಕಿಗೆ ಮತ್ತು ಯುವಜನರಿಗೆ ಮಾನಸಿಕ ಆರೋಗ್ಯದ ಬಗ್ಗೆ ಅದರಲ್ಲೂ ವಿದ್ಯಾರ್ಥಿಗಳು ಪ್ರಸಕ್ತ ಪರಿಸ್ಥಿತಿಯಲ್ಲಿ ಎದುರಿಸುತ್ತಿರುವ ಮಾನಸಿಕ ಸಮಸ್ಯೆಗಳ ಬಗ್ಗೆ ಸವಿವರವಾಗಿ ತಿಳಿಸಿದರು. ವಿದ್ಯಾರ್ಥಿಗಳು ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಗೆ ಒಳಗಾಗುತ್ತಿರುವುದು ಅತ್ಯಂತ ನೋವಿನ ಸಂಗತಿ ಆಗಿದೆ. ಹಾಗಾಗಿ ಅಧ್ಯಾಪಕರು ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಮಾಡಬೇಕು . ಅವರೊಂದಿಗೆ ಆತ್ಮೀಯವಾಗಿ ಮಾತಾನಾಡಿಸುವ ಮೂಲಕ ಖಿನ್ನತೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳನ್ನು ಅದರಿಂದ ಹೊರಗೆ ತರಬೇಕು ಎಂದು ತಿಳಿಸಿದರು. ಸಮಾಜದಲ್ಲಿ ಪ್ರಸ್ತುತ ವಿದ್ಯಾಮಾನದಲ್ಲಿ ನಡೆಯುತ್ತಿರುವ ಜಾತಿ ವ್ಯವಸ್ಥೆ, ಭಷ್ಟಾಚಾರ, ಮೇಲು ಕೀಳು, ವ್ಯವಸ್ಥೆಗಳು ವಿದ್ಯಾರ್ಥಿಗಳಲ್ಲಿ ಖಿನ್ನತೆಯನ್ನು ಉಂಟುಮಾಡುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ., ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಗಳಾದ ಪ್ರೊ. ರೊನಾಲ್ಡ್ ಪ್ರವೀಣ್ ಕೊರಾಯ, ಯುವ ರೆಡ್ ಕ್ರಾಸ್ ಅಧಿಕಾರಿ ಹಾಗೂ ರೊವರ್ ಸ್ಕೌಟ್ ಲೀಡರ್ ಡಾ.ರವಿ ಎಂ.ಎನ್., ಕಾರ್ಯಕ್ರಮ ಸಂಯೋಜಕಾರದ ಡಾ. ದಿವ್ಯಪ್ರಭು ಮತ್ತು ಕಾಲೇಜಿನ ಎಲ್ಲಾ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು..

Related posts

ವಲಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಬಳoಜ -ತೆಂಕಕಾರಂದೂರು- ನಾಲ್ಕೂರು ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಂ ಪ ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದರಿಗೆ ‘ಮುಖ್ಯಮಂತ್ರಿ ಚಿನ್ನದ ಪದಕ’

Suddi Udaya
error: Content is protected !!