23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

ಬೆಳ್ತಂಗಡಿ: ಅನೇಕ ಮಂದಿ ವಿದ್ಯಾರ್ಥಿಗಳು ನಿರೀಕ್ಷೆ ಇಟ್ಟಿರುವ ದ್ವಿತೀಯ ಪಿಯುಸಿ ಫಲಿತಾಂಶ ಎ.9ರಂದು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರ ಪ್ರಕಟಣೆ ಎ.8ರಂದು ತಿಳಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಪ್ರಕಟಣೆ ಮೂಲಕ ತಿಳಿಸಿದ್ದು, ಏ.೭ರಂದು ಫಲಿತಾಂಶ ಪ್ರಕಟಿಸುತ್ತಿಲ್ಲ. ಕೊನೆಯ ಹಂತದ ಮೌಲ್ಯಮಾಪನ ಕೆಲಸ ಬಾಕಿ ಇರುವುದರಿಂದ ಫಲಿತಾಂಶ ಪ್ರಕಟಿಸಲಾಗುತ್ತಿಲ್ಲ ಎಂದು ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ಪ್ರಕಾಶ್ ಮಾಹಿತಿ ಕೊಟ್ಟಿದ್ದರು. ಇದೀಗ ಏ.೯ಕ್ಕೆ ಪರೀಕ್ಷೆ ದಿನಾಂಕ ಮರುನಿಗದಿಯಾಗಿದೆ. ಮಂಡಳಿ ತನ್ನ ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಫಲಿತಾಂಶ ಪ್ರಕಟಿಸಲಿದೆ.
ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕ ಹಾಕಿ ಫಲಿತಾಂಶ ನೋಡಬಹುದು. ಅಂಕಪಟ್ಟಿ ಡೌನ್ಲೋಡ್ ಮಾಡಿ, ಪ್ರಿಂಟ್ ಕೂಡಾ ತೆಗೆದುಕೊಳ್ಳಬಹುದು. ಈ ವರ್ಷ ಒಟ್ಟು 7,10,363 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ಪರೀಕ್ಷೆಗಳು ನಡೆದಿದ್ದವು. ರಾಜ್ಯದಾದ್ಯಂತ ಒಟ್ಟು 1217 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

Related posts

ಅಂತರ್ ಕಾಲೇಜು “ತುಳು ಐಸಿರೇ- 2023” : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ಸುರೇಶ್ ಅವರಿಗೆ  ಬೀಳ್ಕೊಡುಗೆ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಶ್ರೀ ಪ್ರಶಸ್ತಿ

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya
error: Content is protected !!