25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ರಾಜ್ಯ ಸರ್ಕಾರದಿಂದ ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ : ಇದು ಬಡಜನರ ಮೇಲಿನ ಮರಣ ಶಾಸನ: ಶೇಖರ ಎಲ್

ಬೆಳ್ತಂಗಡಿ: ದ.ಕ ಜಿಲ್ಲೆಯ ವಿವಿಧ ಸಮುದಾಯ ಆರೋಗ್ಯ ಕೇಂದ್ರ , ತಾಲೂಕು ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳೊಂದಿಗೆ ಕರಾರು ಒಪ್ಪಂದ ಮಾಡಿಕೊಳ್ಳುವ ಮೂಲಕ ರಾಜ್ಯ ಸರ್ಕಾರ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಇದು ಬಡಜನರ ಮೇಲಿನ ಮರಣ ಶಾಸನವಾಗಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ಸಂಚಾಲಕ ಶೇಖರ್ ಎಲ್ . ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಡಜನರಿಗೆ ಉಚಿತ ಆರೋಗ್ಯ ಸೇವೆ ನೀಡುವ ಸರ್ಕಾರಿ ಆಸ್ಪತ್ರೆಗಳು ಜನಸಾಮಾನ್ಯರಿಗೆ ವರದಾನವಾಗಿತ್ತು. ಇದೀಗ ಏಕಾಏಕಿ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳೊಂದಿಗೆ ಕರಾರು ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಸರ್ಕಾರಿ ಆಸ್ಪತ್ರೆಗಳನ್ನು ಬಡಜನರ ಸುಲಿಗೆ ಕೇಂದ್ರವಾಗಿ , ಉಪಯೋಗಿಸಲು ಅವಕಾಶ ಮಾಡಿಕೊಟ್ಟಿದೆ. ಇದು ಸರ್ಕಾರದ ಅವಿವೇಕಿತನದ ತೀರ್ಮಾನವಾಗಿದ್ದು , ಸರ್ಕಾರಕ್ಕೆ ಸಂವಿಧಾನಬದ್ಧ ಉಚಿತ ಆರೋಗ್ಯ ಸೇವೆ ನೀಡಲು ಸಾಧ್ಯವಿಲ್ಲ ಎಂಬುದನ್ನು ಒಪ್ಪಿಕೊಂಡಂತಾಗಿದೆ. ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಮಂಜೂರುಗೊಳಿಸಿ , ಖಾಸಗಿ ಮೆಡಿಕಲ್ ಕಾಲೇಜ್ ಗಳ ಕೆಂಗಣ್ಣಿಗೆ ಗುರಿಯಾದ ರಾಜ್ಯ ಸರ್ಕಾರ ಇದೀಗ ಅವರನ್ನು ಸಂತೋಷ ಪಡಿಸಲು ಜಿಲ್ಲೆಯ ಬಡಜನರನ್ನು ಬಲಿಕೊಡಲು ಸರ್ಕಾರಿ ಆಸ್ಪತ್ರೆಗಳನ್ನೇ ಖಾಸಗಿ ಆಸ್ಪತ್ರೆಗಳಿಗೆ ಮಾರಲು ಹೊರಟಿದೆ. ಯಾವುದೇ ಕಾರಣಕ್ಕೂ ಬಡಜನರ ಜೀವನದಲ್ಲಿ ಚೆಲ್ಲಾಟವಾಡಲು ಅವಕಾಶ ನೀಡುವುದಿಲ್ಲ. ಒಂದು ವೇಳೆ ಈ ಒಪ್ಪಂದದಿಂದ ಹಿಂದೆ ಸರಿಯದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಸಚಿವರು ಜಿಲ್ಲೆಯಲ್ಲಿ ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ , ಘೇರಾವ್ ಹಾಕಲಾಗುತ್ತದೆ.

Related posts

ಕಳೆಂಜ: ಪಲ್ಲದಂಗಡಿ, ಕಾಂತ್ರೇಲು ಹಾಗೂ ಹತ್ಯಡ್ಕದ ಮುದ್ದಿಗೆ, ಕುಂಟಾಲಪಳಿಕೆ ಕೆಎಸ್ ಆರ್ ಟಿಸಿ ಬಸ್ಸು ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ ಮುದ್ದಿಗೆಯ ಗ್ರಾಮಸ್ಥರು

Suddi Udaya

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Suddi Udaya

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya
error: Content is protected !!