September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಶಾಸಕ ಹರೀಶ್ ಪೂಂಜರಿಂದ ಪಿಲಿಚಾಮುಂಡಿಕಲ್ಲು-ಶಕ್ತಿನಗರ ರಸ್ತೆ ಡಾಮರೀಕರಣಕ್ಕೆ ಶಿಲಾನ್ಯಾಸ: ಬದ್ಧತೆಯ ಜನಪ್ರತಿನಿಧಿನಗಳಿಂದ ಅಭಿವೃದ್ಧಿ ಸಾಧ್ಯ: ಹರೀಶ್ ಪೂಂಜ

ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲಿಚಾಮುಂಡಿಕಲ್ಲು-ಶಕ್ತಿನಗರ ರಸ್ತೆ ಡಾಮರೀಕರಣಕ್ಕೆ ಶಾಸಕ ಹರೀಶ್ ಪೂಂಜ ಅವರು ಎ.೮ ರಂದು ಶಿಲಾನ್ಯಾಸ ನೇರವೇರಿಸಿದರು.

ಬಳಿಕ ಮಾತನಾಡಿದ ಅವರು ರಾಜ್ಯ ಸರ್ಕಾರ ಅಭಿವೃದ್ಧಿಗೆ ಪೂರಕವಾದ ಅನುದಾನ ಒದಗಿಸುತ್ತಿಲ್ಲ. ಬದ್ಧತೆಯ ಜನಪ್ರತಿನಿದಿನಗಳಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಅಭಿವೃದ್ಧಿಯಲ್ಲಿ ರಾಜಕೀಯ ಜಾತಿ, ಮತ, ಭೇದ ಇಲ್ಲ. ಶೀಘ್ರವೇ ರಸ್ತೆ ಕಾಮಗಾರಿ ಆರಂಭಗೊಳ್ಳುವುದು ಆಗಾಗಿ ಮೊಗೆರೋಡಿ ಕನ್‌ಸ್ಟçಕ್ಷನ್ ನವರು ಗುತ್ತಿಗೆ ವಹಿಸಿಕೊಂಡಿದ್ದಾರೆ ಕಾಮಗಾರಿ ನಡೆಯುವ ವೇಳೆ ನಾಗರೀಕರ ಸಹಕಾರ ಇರಲಿ. ನಮ್ಮ ಸರಕಾರ ಅಧಿಕಾರ ಬಂದಾಗ ಈ ರಸ್ತೆಯನ್ನು ೫.೪ ಮೀಟರ್ ರಸ್ತೆಯಾಗಿ ಪರಿವರ್ತಿಸಿ ಕಾಂಕ್ರೀಟ್ ರಸ್ತೆಯಾಗಿ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಪ್ರಮುಖರಾದ ರಾಜೇಶ್ ಶೆಟ್ಟಿ ನವಶಕ್ತಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ, ಸುಕೇಶ್ ಕುಮಾರ್ ಕಂಡಬು, ಪ್ರವೀಣ್ ಕುಮಾರ್ ಅಜ್ರಿ ಪಾಡ್ಯಾರಬೀಡು, ಗಣೇಶ್ ಕೆ., ಪ್ರದೀಪ್ ಶೆಟ್ಟಿ, ರಚನಾ ಕೆ, ಮಂಜುನಾಥ್ ಕುಂಬಳೆ, ಚಂದ್ರಹಾಸ್ , ಸುನೀಶ್ ಕೆ. ಕಂಡಬು, ವಿಠಲ ಆಚಾರ್ಯ ಸಹಿತ ಮತ್ತಿತರರು ಉಪಸ್ಥಿತರಿದ್ದರು. ಸುಧಾಮಾಣಿ ಆರ್ ನಿರೂಪಿಸಿದರು.

Related posts

ತಣ್ಣೀರುಪಂತ: ಪಾಲೇದು ಪರಿಸರದಲ್ಲಿ ಕಾಡುಕೋಣ ಓಡಾಟ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಗಣಿತ ಲೋಕದ ಪ್ರದರ್ಶನ

Suddi Udaya

ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವತಂತ್ರಿಗಳಿಗೆ ಪೂರ್ಣಕುಂಭದ ಸ್ವಾಗತ

Suddi Udaya

ಹತ್ಯಡ್ಕ : ಶ್ರೀ ವಿಠೋಬ ರಕುಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶೃಂಗೇರಿಯ ಜಗದ್ಗುರು ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರಿಂದ ರೂ.5 ಲಕ್ಷ ದೇಣಿಗೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಮತದಾರ ಪಟ್ಟಿ ತೀವ್ರ ಪರಿಷ್ಕರಣೆಯ ವಿಶೇಷ ಕಾರ್ಯಾಗಾರ

Suddi Udaya

ಮಾಲಾಡಿ: ಪುರಿಯ-ಕುರಿಯೋಡಿರಸ್ತೆ ಕಾಮಗಾರಿ ಸ್ಥಳಾಂತರಕ್ಕೆ ವಿರೋಧ: ಶೀಘ್ರ ಕಾಮಗಾರಿಗೆ ನಾಗರಿಕರ ಒತ್ತಾಯ

Suddi Udaya
error: Content is protected !!