23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ-ಸ್ನೇಹಕಿರಣ ಮಹಿಳಾ ಜಿಲ್ಲಾ ಒಕ್ಕೂಟದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಕಾರದಿಂದ ನಡೆಸುತ್ತಿರುವ ಮಹಿಳಾ ಸಬಲೀಕರಣ ಯೋಜನೆಯಡಿಯಲ್ಲಿರುವ ಜಿಲ್ಲಾ ಒಕ್ಕೂಟದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿಯನ್ನು ನೆಲ್ಯಾಡಿ ಸೈಂಟ್ ಆಲ್ಫೋನ್ಸಾ ಚರ್ಚ್ ಸಭಾಂಗಣದಲ್ಲಿ ಎ.7ರಂದು ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ನೇಹ ಕಿರಣ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಎಲಿಯಮ್ಮ ತೋಮಸ್ ವಹಿಸಿದ್ದರು. ಉದ್ಘಾಟನೆಯನ್ನು ಮಾನಿನಿ ರಾಜ್ಯ ಮಹಿಳಾ ಒಕ್ಕೂಟ ಬೆಂಗಳೂರು ಇದರ ಅಧ್ಯಕ್ಷೆ ಮಂಜುಳಾ ಜೋನ್ ನೆರವೇರಿಸಿ ಶುಭ ಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕ ವಂ.ಫಾ. ಬಿನೋಯಿ ಎ.ಜೆ ಇವರು ಒಕ್ಕೂಟಗಳ ಸದಸ್ಯರು ನಾಯಕತ್ವ ವಹಿಸಿ ಸಂಘಟನೆಗಳನ್ನು ಬಲಪಡಿಸಬೇಕು ಹಾಗೂ ಉತ್ತಮ ರೀತಿಯಲ್ಲಿ ಸಂಘಟನೆಗಳನ್ನು ಮುನ್ನಡೆಸಲು ಬಲಗಳು. ಬಲಹೀನತೆಗಳು ಅವಕಾಶಗಳು ಮತ್ತು ಅಪಾಯಗಳನ್ನು ಗುರುತಿಸಿ ವೈಯಕ್ತಿಕ ಹಾಗೂ ಸಮೂದಾಯದ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಾಗಿ ಕಾರ್ಯ ನಿರ್ವಹಿಸಬೇಕು ಎಂಬ ಬಗ್ಗೆ ತರಬೇತಿ ನೀಡಿದರು.

ಕಿರಣ್ ಮಹಿಳಾ ತಾಲೂಕು ಒಕ್ಕೂಟದ ಸದಸ್ಯೆ ಚಂದನ ಪ್ರಾರ್ಥನಾ ಗೀತೆ ಹಾಡಿದರು. ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಉಪಾಧ್ಯಕ್ಷೆ ಜಿನ್ಸಿ ರಾಜೇಶ್ ಸ್ವಾಗತಿಸಿದರು. ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಜೊತೆ ಕಾರ್ಯದರ್ಶಿ ವೈಶಾಲಿ ವಂದಿಸಿದರು. ಮಾರ್ಕ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಒಕ್ಕೂಟದ ಸದಸ್ಯರು ಹಾಗೂ ಮಹಾ ಸಂಘಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Related posts

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗೆಜ್ಜೆಗಿರಿ ಕ್ಷೇತ್ರದಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಗೌರವ

Suddi Udaya

ಶಿಶಿಲ: ಕೊಳಂಬೆ ನಿವಾಸಿ ಅಕ್ಕು ನಿಧನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ರವರಿಂದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯಹಸ್ತ

Suddi Udaya

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯ ಭೌತಿಕ ಸೌಲಭ್ಯಕ್ಕೆ ರೋಟರಿ ಕ್ಲಬ್ ಸಿದ್ದಕಟ್ಟೆ ಇವರಿಂದ ಆರ್ಥಿಕ ನೆರವು

Suddi Udaya
error: Content is protected !!