22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

ಬೆಳ್ತಂಗಡಿ: ಅನೇಕ ಮಂದಿ ವಿದ್ಯಾರ್ಥಿಗಳು ನಿರೀಕ್ಷೆ ಇಟ್ಟಿರುವ ದ್ವಿತೀಯ ಪಿಯುಸಿ ಫಲಿತಾಂಶ ಎ.9ರಂದು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರ ಪ್ರಕಟಣೆ ಎ.8ರಂದು ತಿಳಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಪ್ರಕಟಣೆ ಮೂಲಕ ತಿಳಿಸಿದ್ದು, ಏ.೭ರಂದು ಫಲಿತಾಂಶ ಪ್ರಕಟಿಸುತ್ತಿಲ್ಲ. ಕೊನೆಯ ಹಂತದ ಮೌಲ್ಯಮಾಪನ ಕೆಲಸ ಬಾಕಿ ಇರುವುದರಿಂದ ಫಲಿತಾಂಶ ಪ್ರಕಟಿಸಲಾಗುತ್ತಿಲ್ಲ ಎಂದು ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ಪ್ರಕಾಶ್ ಮಾಹಿತಿ ಕೊಟ್ಟಿದ್ದರು. ಇದೀಗ ಏ.೯ಕ್ಕೆ ಪರೀಕ್ಷೆ ದಿನಾಂಕ ಮರುನಿಗದಿಯಾಗಿದೆ. ಮಂಡಳಿ ತನ್ನ ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಫಲಿತಾಂಶ ಪ್ರಕಟಿಸಲಿದೆ.
ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕ ಹಾಕಿ ಫಲಿತಾಂಶ ನೋಡಬಹುದು. ಅಂಕಪಟ್ಟಿ ಡೌನ್ಲೋಡ್ ಮಾಡಿ, ಪ್ರಿಂಟ್ ಕೂಡಾ ತೆಗೆದುಕೊಳ್ಳಬಹುದು. ಈ ವರ್ಷ ಒಟ್ಟು 7,10,363 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ಪರೀಕ್ಷೆಗಳು ನಡೆದಿದ್ದವು. ರಾಜ್ಯದಾದ್ಯಂತ ಒಟ್ಟು 1217 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

Related posts

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

Suddi Udaya

ಸವಣಾಲು: ಹುಲಿ ಗಣತಿಗೆ ಹಾಕಿದ್ದ ಕ್ಯಾಮೆರಾಗಳ ಕಳ್ಳತನ

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಕೊಡಿಯಾಲಬೈಲು ಸ.ಹಿ.ಪ್ರಾ. ಶಾಲೆಯಲ್ಲಿ ಕೈ ತೊಳೆಯುವ ನೀರಿನ ಘಟಕ ಉದ್ಘಾಟನೆ

Suddi Udaya

ಕೋಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಪೂಜೆ ಹಾಗೂ ರೆಖ್ಯ ಗ್ರಾಮದ ಸಮಗ್ರ ಅಭಿವೃದ್ಧಿಗೆ ರೂ. 15ಕೋಟಿ ಅನುದಾನ ನೀಡಿರುವ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
error: Content is protected !!