22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ರಾಜ್ಯ ಸರ್ಕಾರದಿಂದ ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ : ಇದು ಬಡಜನರ ಮೇಲಿನ ಮರಣ ಶಾಸನ: ಶೇಖರ ಎಲ್

ಬೆಳ್ತಂಗಡಿ: ದ.ಕ ಜಿಲ್ಲೆಯ ವಿವಿಧ ಸಮುದಾಯ ಆರೋಗ್ಯ ಕೇಂದ್ರ , ತಾಲೂಕು ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳೊಂದಿಗೆ ಕರಾರು ಒಪ್ಪಂದ ಮಾಡಿಕೊಳ್ಳುವ ಮೂಲಕ ರಾಜ್ಯ ಸರ್ಕಾರ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಇದು ಬಡಜನರ ಮೇಲಿನ ಮರಣ ಶಾಸನವಾಗಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ಸಂಚಾಲಕ ಶೇಖರ್ ಎಲ್ . ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಡಜನರಿಗೆ ಉಚಿತ ಆರೋಗ್ಯ ಸೇವೆ ನೀಡುವ ಸರ್ಕಾರಿ ಆಸ್ಪತ್ರೆಗಳು ಜನಸಾಮಾನ್ಯರಿಗೆ ವರದಾನವಾಗಿತ್ತು. ಇದೀಗ ಏಕಾಏಕಿ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳೊಂದಿಗೆ ಕರಾರು ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಸರ್ಕಾರಿ ಆಸ್ಪತ್ರೆಗಳನ್ನು ಬಡಜನರ ಸುಲಿಗೆ ಕೇಂದ್ರವಾಗಿ , ಉಪಯೋಗಿಸಲು ಅವಕಾಶ ಮಾಡಿಕೊಟ್ಟಿದೆ. ಇದು ಸರ್ಕಾರದ ಅವಿವೇಕಿತನದ ತೀರ್ಮಾನವಾಗಿದ್ದು , ಸರ್ಕಾರಕ್ಕೆ ಸಂವಿಧಾನಬದ್ಧ ಉಚಿತ ಆರೋಗ್ಯ ಸೇವೆ ನೀಡಲು ಸಾಧ್ಯವಿಲ್ಲ ಎಂಬುದನ್ನು ಒಪ್ಪಿಕೊಂಡಂತಾಗಿದೆ. ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಮಂಜೂರುಗೊಳಿಸಿ , ಖಾಸಗಿ ಮೆಡಿಕಲ್ ಕಾಲೇಜ್ ಗಳ ಕೆಂಗಣ್ಣಿಗೆ ಗುರಿಯಾದ ರಾಜ್ಯ ಸರ್ಕಾರ ಇದೀಗ ಅವರನ್ನು ಸಂತೋಷ ಪಡಿಸಲು ಜಿಲ್ಲೆಯ ಬಡಜನರನ್ನು ಬಲಿಕೊಡಲು ಸರ್ಕಾರಿ ಆಸ್ಪತ್ರೆಗಳನ್ನೇ ಖಾಸಗಿ ಆಸ್ಪತ್ರೆಗಳಿಗೆ ಮಾರಲು ಹೊರಟಿದೆ. ಯಾವುದೇ ಕಾರಣಕ್ಕೂ ಬಡಜನರ ಜೀವನದಲ್ಲಿ ಚೆಲ್ಲಾಟವಾಡಲು ಅವಕಾಶ ನೀಡುವುದಿಲ್ಲ. ಒಂದು ವೇಳೆ ಈ ಒಪ್ಪಂದದಿಂದ ಹಿಂದೆ ಸರಿಯದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಸಚಿವರು ಜಿಲ್ಲೆಯಲ್ಲಿ ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ , ಘೇರಾವ್ ಹಾಕಲಾಗುತ್ತದೆ.

Related posts

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

Suddi Udaya

ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸ.ಪ್ರೌ. ಶಾಲೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಉಜಿರೆ:ಧೀಮತಿ ಜೈನ ಮಹಿಳಾ ಸಮಾಜದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya
error: Content is protected !!