23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಏ.9: ನಾವರದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿಯಿಂದ “ನಾಗರತಿ” ಯಕ್ಷಗಾನ

ನಾವರ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿ ನಾವರ ಇದರ ಉದ್ಘಾಟನಾ ಸಮಾರಂಭ ಮತ್ತು ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ಮೂಲಸ್ಥಾನ ಗೆಜ್ಜೆಗಿರಿ ಬಡಗನ್ನೂರು ಪುತ್ತೂರು ಇವರಿಂದ “ನಾಗರತಿ” ಎಂಬ ಯಕ್ಷಗಾನ ಎ.9ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಪ್ರದರ್ಶನಗೊಳ್ಳಲಿದೆ.
ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅಳದಂಗಡಿ ಅರಮನೆಯ ಶಿವಪ್ರಸಾದ ಅಜಿಲರು ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ, ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಗೆಜ್ಜೆಗಿರಿ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ, ಶ್ರೀ ಗೆಜ್ಜೆಗಿರಿ ಮೇಳದ ಪ್ರಧಾನ ಸಂಚಾಲಕ ಪ್ರಪುಲ್ ಕುಮಾರ್ ಕಾರ್ಕಳ, ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸೇವಾ ಸಮಿತಿ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಪ್ರಗತಿಪರ ಕೃಷಿಕ ಎಂ. ಗಂಗಾಧರ ಮಿತ್ತಮಾರು, ಲಯನ್ಸ್ ಕ್ಲಬ್ ನಿಯೋಜಿತ ವಲಯಾಧ್ಯಕ್ಷ ಲ. ದೇವದಾಸ್ ಶೆಟ್ಟಿ, ನಾವರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಾನಂದ ಪೂಜಾರಿ ಕೊರಲ್ಲ, ನಾವರ ಶ್ರೀ ಗೆಜ್ಜೆಗಿರಿ ಬಯಲಾಟ ಸಮಿತಿ ಅಧ್ಯಕ್ಷ, ನಾಟಿ ವೈದ್ಯ ಬೇಬಿ ಪೂಜಾರಿ ಪುನ್ಕೆತ್ಯಾರು, ಎನ್. ರವಿರಾಜ್ ಹೆಗ್ಡೆ ನಾವರಗುತ್ತು ಭಾಗವಹಿಸಲಿದ್ದಾರೆ ಎಂದು ಸಮಿತಿ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ತಿಳಿಸಿದ್ದಾರೆ.

Related posts

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

Suddi Udaya

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಮೆಡಿಕಲ್ ಕ್ಯಾಂಪ್

Suddi Udaya

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!