September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ-ಸ್ನೇಹಕಿರಣ ಮಹಿಳಾ ಜಿಲ್ಲಾ ಒಕ್ಕೂಟದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

ಬೆಳ್ತಂಗಡಿ: ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಹಕಾರದಿಂದ ನಡೆಸುತ್ತಿರುವ ಮಹಿಳಾ ಸಬಲೀಕರಣ ಯೋಜನೆಯಡಿಯಲ್ಲಿರುವ ಜಿಲ್ಲಾ ಒಕ್ಕೂಟದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿಯನ್ನು ನೆಲ್ಯಾಡಿ ಸೈಂಟ್ ಆಲ್ಫೋನ್ಸಾ ಚರ್ಚ್ ಸಭಾಂಗಣದಲ್ಲಿ ಎ.7ರಂದು ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ನೇಹ ಕಿರಣ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಎಲಿಯಮ್ಮ ತೋಮಸ್ ವಹಿಸಿದ್ದರು. ಉದ್ಘಾಟನೆಯನ್ನು ಮಾನಿನಿ ರಾಜ್ಯ ಮಹಿಳಾ ಒಕ್ಕೂಟ ಬೆಂಗಳೂರು ಇದರ ಅಧ್ಯಕ್ಷೆ ಮಂಜುಳಾ ಜೋನ್ ನೆರವೇರಿಸಿ ಶುಭ ಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕ ವಂ.ಫಾ. ಬಿನೋಯಿ ಎ.ಜೆ ಇವರು ಒಕ್ಕೂಟಗಳ ಸದಸ್ಯರು ನಾಯಕತ್ವ ವಹಿಸಿ ಸಂಘಟನೆಗಳನ್ನು ಬಲಪಡಿಸಬೇಕು ಹಾಗೂ ಉತ್ತಮ ರೀತಿಯಲ್ಲಿ ಸಂಘಟನೆಗಳನ್ನು ಮುನ್ನಡೆಸಲು ಬಲಗಳು. ಬಲಹೀನತೆಗಳು ಅವಕಾಶಗಳು ಮತ್ತು ಅಪಾಯಗಳನ್ನು ಗುರುತಿಸಿ ವೈಯಕ್ತಿಕ ಹಾಗೂ ಸಮೂದಾಯದ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಾಗಿ ಕಾರ್ಯ ನಿರ್ವಹಿಸಬೇಕು ಎಂಬ ಬಗ್ಗೆ ತರಬೇತಿ ನೀಡಿದರು.

ಕಿರಣ್ ಮಹಿಳಾ ತಾಲೂಕು ಒಕ್ಕೂಟದ ಸದಸ್ಯೆ ಚಂದನ ಪ್ರಾರ್ಥನಾ ಗೀತೆ ಹಾಡಿದರು. ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಉಪಾಧ್ಯಕ್ಷೆ ಜಿನ್ಸಿ ರಾಜೇಶ್ ಸ್ವಾಗತಿಸಿದರು. ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಜೊತೆ ಕಾರ್ಯದರ್ಶಿ ವೈಶಾಲಿ ವಂದಿಸಿದರು. ಮಾರ್ಕ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಒಕ್ಕೂಟದ ಸದಸ್ಯರು ಹಾಗೂ ಮಹಾ ಸಂಘಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

Related posts

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್-ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಮತ್ತು ಸಾಂಸ್ಕೃತಿಕ ವೇದಿಕೆ ಇವುಗಳ ಸಹಯೋಗದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

Suddi Udaya

ಬಸದಿಗಳಿಗೆ ಅನುದಾನ : ಸವಣಾಲು ಕ್ಷೇತ್ರದ ಬಸದಿಯ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಬಿಡುಗಡೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶ್ರೀಚರಣ್ ಜೈನ್ ಬಂಗಾಡಿ ರವರಿಗೆ ಚಿನ್ನದ ಪದಕ

Suddi Udaya
error: Content is protected !!