September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ರಾಜ್ಯ ಸರ್ಕಾರದಿಂದ ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ : ಇದು ಬಡಜನರ ಮೇಲಿನ ಮರಣ ಶಾಸನ: ಶೇಖರ ಎಲ್

ಬೆಳ್ತಂಗಡಿ: ದ.ಕ ಜಿಲ್ಲೆಯ ವಿವಿಧ ಸಮುದಾಯ ಆರೋಗ್ಯ ಕೇಂದ್ರ , ತಾಲೂಕು ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳೊಂದಿಗೆ ಕರಾರು ಒಪ್ಪಂದ ಮಾಡಿಕೊಳ್ಳುವ ಮೂಲಕ ರಾಜ್ಯ ಸರ್ಕಾರ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಇದು ಬಡಜನರ ಮೇಲಿನ ಮರಣ ಶಾಸನವಾಗಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ಸಂಚಾಲಕ ಶೇಖರ್ ಎಲ್ . ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಡಜನರಿಗೆ ಉಚಿತ ಆರೋಗ್ಯ ಸೇವೆ ನೀಡುವ ಸರ್ಕಾರಿ ಆಸ್ಪತ್ರೆಗಳು ಜನಸಾಮಾನ್ಯರಿಗೆ ವರದಾನವಾಗಿತ್ತು. ಇದೀಗ ಏಕಾಏಕಿ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳೊಂದಿಗೆ ಕರಾರು ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಸರ್ಕಾರಿ ಆಸ್ಪತ್ರೆಗಳನ್ನು ಬಡಜನರ ಸುಲಿಗೆ ಕೇಂದ್ರವಾಗಿ , ಉಪಯೋಗಿಸಲು ಅವಕಾಶ ಮಾಡಿಕೊಟ್ಟಿದೆ. ಇದು ಸರ್ಕಾರದ ಅವಿವೇಕಿತನದ ತೀರ್ಮಾನವಾಗಿದ್ದು , ಸರ್ಕಾರಕ್ಕೆ ಸಂವಿಧಾನಬದ್ಧ ಉಚಿತ ಆರೋಗ್ಯ ಸೇವೆ ನೀಡಲು ಸಾಧ್ಯವಿಲ್ಲ ಎಂಬುದನ್ನು ಒಪ್ಪಿಕೊಂಡಂತಾಗಿದೆ. ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಮಂಜೂರುಗೊಳಿಸಿ , ಖಾಸಗಿ ಮೆಡಿಕಲ್ ಕಾಲೇಜ್ ಗಳ ಕೆಂಗಣ್ಣಿಗೆ ಗುರಿಯಾದ ರಾಜ್ಯ ಸರ್ಕಾರ ಇದೀಗ ಅವರನ್ನು ಸಂತೋಷ ಪಡಿಸಲು ಜಿಲ್ಲೆಯ ಬಡಜನರನ್ನು ಬಲಿಕೊಡಲು ಸರ್ಕಾರಿ ಆಸ್ಪತ್ರೆಗಳನ್ನೇ ಖಾಸಗಿ ಆಸ್ಪತ್ರೆಗಳಿಗೆ ಮಾರಲು ಹೊರಟಿದೆ. ಯಾವುದೇ ಕಾರಣಕ್ಕೂ ಬಡಜನರ ಜೀವನದಲ್ಲಿ ಚೆಲ್ಲಾಟವಾಡಲು ಅವಕಾಶ ನೀಡುವುದಿಲ್ಲ. ಒಂದು ವೇಳೆ ಈ ಒಪ್ಪಂದದಿಂದ ಹಿಂದೆ ಸರಿಯದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಸಚಿವರು ಜಿಲ್ಲೆಯಲ್ಲಿ ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ , ಘೇರಾವ್ ಹಾಕಲಾಗುತ್ತದೆ.

Related posts

ವಾತ್ಸಲ್ಯ ಮನೆ ನಿರ್ಮಾಣದ ಮೂಲಕ ಬೆಜಕ್ರೆರವರ ಬದುಕಿಗೆ ಬೆಳಕಾದ ಗ್ರಾಮಾಭಿವೃದ್ಧಿ ಯೋಜನೆ

Suddi Udaya

ಎಸ್‌ಡಿಎಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿನೂತನ ಕಾರ್ಯಕ್ರಮ: 25 ವರ್ಷಗಳ ಹಿಂದೆ ಕಲಿತ ಹಿರಿಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಮಾವೇಶ

Suddi Udaya

ಭಾರೀ ಮಳೆಗೆ ತೆಕ್ಕಾರು ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ನೂತನ ಮನೆಯ ಕಾಂಪೌಂಡ್ ಕುಸಿತ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರಿಗೆ ಲಯನ್ಸ್ ಕ್ಲಬ್ ನಿಂದ ಹುಟ್ಟುಹಬ್ಬದ ಶುಭಾಶಯ

Suddi Udaya

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya
error: Content is protected !!