September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಶಾಸಕ ಹರೀಶ್ ಪೂಂಜರಿಂದ ಪಿಲಿಚಾಮುಂಡಿಕಲ್ಲು-ಶಕ್ತಿನಗರ ರಸ್ತೆ ಡಾಮರೀಕರಣಕ್ಕೆ ಶಿಲಾನ್ಯಾಸ: ಬದ್ಧತೆಯ ಜನಪ್ರತಿನಿಧಿನಗಳಿಂದ ಅಭಿವೃದ್ಧಿ ಸಾಧ್ಯ: ಹರೀಶ್ ಪೂಂಜ

ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲಿಚಾಮುಂಡಿಕಲ್ಲು-ಶಕ್ತಿನಗರ ರಸ್ತೆ ಡಾಮರೀಕರಣಕ್ಕೆ ಶಾಸಕ ಹರೀಶ್ ಪೂಂಜ ಅವರು ಎ.೮ ರಂದು ಶಿಲಾನ್ಯಾಸ ನೇರವೇರಿಸಿದರು.

ಬಳಿಕ ಮಾತನಾಡಿದ ಅವರು ರಾಜ್ಯ ಸರ್ಕಾರ ಅಭಿವೃದ್ಧಿಗೆ ಪೂರಕವಾದ ಅನುದಾನ ಒದಗಿಸುತ್ತಿಲ್ಲ. ಬದ್ಧತೆಯ ಜನಪ್ರತಿನಿದಿನಗಳಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಅಭಿವೃದ್ಧಿಯಲ್ಲಿ ರಾಜಕೀಯ ಜಾತಿ, ಮತ, ಭೇದ ಇಲ್ಲ. ಶೀಘ್ರವೇ ರಸ್ತೆ ಕಾಮಗಾರಿ ಆರಂಭಗೊಳ್ಳುವುದು ಆಗಾಗಿ ಮೊಗೆರೋಡಿ ಕನ್‌ಸ್ಟçಕ್ಷನ್ ನವರು ಗುತ್ತಿಗೆ ವಹಿಸಿಕೊಂಡಿದ್ದಾರೆ ಕಾಮಗಾರಿ ನಡೆಯುವ ವೇಳೆ ನಾಗರೀಕರ ಸಹಕಾರ ಇರಲಿ. ನಮ್ಮ ಸರಕಾರ ಅಧಿಕಾರ ಬಂದಾಗ ಈ ರಸ್ತೆಯನ್ನು ೫.೪ ಮೀಟರ್ ರಸ್ತೆಯಾಗಿ ಪರಿವರ್ತಿಸಿ ಕಾಂಕ್ರೀಟ್ ರಸ್ತೆಯಾಗಿ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಪ್ರಮುಖರಾದ ರಾಜೇಶ್ ಶೆಟ್ಟಿ ನವಶಕ್ತಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ, ಸುಕೇಶ್ ಕುಮಾರ್ ಕಂಡಬು, ಪ್ರವೀಣ್ ಕುಮಾರ್ ಅಜ್ರಿ ಪಾಡ್ಯಾರಬೀಡು, ಗಣೇಶ್ ಕೆ., ಪ್ರದೀಪ್ ಶೆಟ್ಟಿ, ರಚನಾ ಕೆ, ಮಂಜುನಾಥ್ ಕುಂಬಳೆ, ಚಂದ್ರಹಾಸ್ , ಸುನೀಶ್ ಕೆ. ಕಂಡಬು, ವಿಠಲ ಆಚಾರ್ಯ ಸಹಿತ ಮತ್ತಿತರರು ಉಪಸ್ಥಿತರಿದ್ದರು. ಸುಧಾಮಾಣಿ ಆರ್ ನಿರೂಪಿಸಿದರು.

Related posts

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಅ.7: ಪುತ್ತೂರಿಗೆ ಶೌರ್ಯ ಜಾಗರಣ ರಥಯಾತ್ರೆ: ಹಿಂದು ಶೌರ್ಯ ಸಂಗಮ

Suddi Udaya

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಮಹಾಸಭೆ

Suddi Udaya

ಗೇರುಕಟ್ಟೆ: ವಿದ್ಯುತ್‌ ತಂತಿ ಮೇಲೆ ಅಪಾಯಕಾರಿ ಮರ

Suddi Udaya

ಎಸ್.ಡಿ.ಎಮ್ ಮಹಿಳಾ ಐ.ಟಿ.ಐ ಯಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya
error: Content is protected !!