23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ವಿದ್ವತ್ ಪಿಯು ಕಾಲೇಜಿಗೆ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ತನುಶ್ರೀ ಶೇ.98.83

ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಪ್ರಥಮ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ ದಾಖಲಿಸುವ ಮೂಲಕ ವಿದ್ಯಾರ್ಥಿಗಳು ಅಮೋಘ ಸಾಧನೆ ತೋರಿದ್ದಾರೆ.

ಪರೀಕ್ಷೆಗೆ ಹಾಜರಾದ ಒಟ್ಟು 154 ವಿದ್ಯಾರ್ಥಿಗಳ ಪೈಕಿ ವಿಜ್ಞಾನ ವಿಭಾಗದಲ್ಲಿ ತನುಶ್ರೀ (593) ಅಂಕ ಗಳಿಸಿ (ರಸಾಯನಶಾಸ್ತ್ರ-100, ಭೌತಶಾಸ್ತ್ರ-100 ಗಣಿತಶಾಸ್ತ್ರ-100, ಜೀವಶಾಸ್ತ್ರ-100), ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾಳೆ. ಉಳಿದಂತೆ ಚಿನ್ಮಯ್ ಜಿ.ಕೆ.(589) ಅಂಕ(ಭೌತಶಾಸ್ತ್ರ-100, ರಸಾಯನಶಾಸ್ತ್ರ-100, ಗಣಿತ-100 ಮತ್ತು ಗಣಕ ವಿಜ್ಞಾನ-100) ಪಡೆದು ದ್ವಿತೀಯ, ದೇವಿಪ್ರಸಾದ್ ಶೆಣೈ (586) ಅಂಕ ಭೌತಶಾಸ್ತ್ರ-100, ಗಣಿತ-100, ಜೀವಶಾಸ್ತ್ರ-100 ಪಡೆದು ತೃತೀಯ ಸ್ಥಾನಿಯಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಧ್ಯಾನ (590) ಅಂಕ (ಕನ್ನಡ-100, ಲೆಕ್ಕಶಾಸ್ತ್ರ ಅಧ್ಯಯನ-100) ಪಡೆಯುವ ಮೂಲಕ ಪ್ರಥಮ ಸ್ಥಾನಿಯಾಗಿದ್ದು, ರಿಷಾಂತ್ ವೈ.ಪಿ. (581), ದ್ವಿತೀಯ ಸ್ಥಾನಿಯಾಗಿದ್ದು, ಶಾನ್ ಹರ್ವಿನ್ ಫೆರ್ನಾಂಡಿಸ್ (580) ತೃತೀಯ ಸ್ಥಾನ ಪಡೆದಿದ್ದಾರೆ. ಕಾಲೇಜು ಮೊದಲ ಪ್ರಯತ್ನದಲ್ಲಿಯೇ ಅದ್ವಿತೀಯ ಸಾಧನೆ ತೋರಿದ್ದಾರೆ.

ಈ ಎಲ್ಲ ವಿದ್ಯಾರ್ಥಿಗಳು ಜೆಇಇ ಮೇನ್ಸ್ -2026 ಪ್ರಥಮ ಹಂತದಲ್ಲಿ 99 ಪರ್ಸೆಂಟೈಲ್ ಪಡೆದಿದ್ದು, ಇದೀಗ ಬೋರ್ಡ್ ಪರೀಕ್ಷೆಯಲ್ಲೂ ಉತ್ತಮ ಸಾಧನೆ ತೋರಿದ್ದಾರೆ.ಸಾಧಕ ವಿದ್ಯಾರ್ಥಿಗಳನ್ನು ವಿದ್ವತ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಪ್ರಶಂಸಿದ್ದಾರೆ.

Related posts

ಬೆಳ್ತಂಗಡಿ: ಅರ್ಹ ಮಹಿಳಾ ರೈತ ಫಲಾನುಭವಿಗಳಿಗೆ ನಾಟಿಕೋಳಿ ಮರಿಗಳ ವಿತರಣೆ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya

ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸೂಳಬೆಟ್ಟು ಸ.ಕಿ. ಪ್ರಾಥಮಿಕ ಶಾಲಾ ವಿಭಾಗದ ನೂತನ ಕಟ್ಟಡ ಉದ್ಘಾಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಹಾಗೂ ಜೀರ್ಣೋದ್ಧಾರ ಕಾರ್ಯಾರಂಭ

Suddi Udaya
error: Content is protected !!