22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ವಿದ್ವತ್ ಪಿಯು ಕಾಲೇಜಿಗೆ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ತನುಶ್ರೀ ಶೇ.98.83

ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಪ್ರಥಮ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ ದಾಖಲಿಸುವ ಮೂಲಕ ವಿದ್ಯಾರ್ಥಿಗಳು ಅಮೋಘ ಸಾಧನೆ ತೋರಿದ್ದಾರೆ.

ಪರೀಕ್ಷೆಗೆ ಹಾಜರಾದ ಒಟ್ಟು 154 ವಿದ್ಯಾರ್ಥಿಗಳ ಪೈಕಿ ವಿಜ್ಞಾನ ವಿಭಾಗದಲ್ಲಿ ತನುಶ್ರೀ (593) ಅಂಕ ಗಳಿಸಿ (ರಸಾಯನಶಾಸ್ತ್ರ-100, ಭೌತಶಾಸ್ತ್ರ-100 ಗಣಿತಶಾಸ್ತ್ರ-100, ಜೀವಶಾಸ್ತ್ರ-100), ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾಳೆ. ಉಳಿದಂತೆ ಚಿನ್ಮಯ್ ಜಿ.ಕೆ.(589) ಅಂಕ(ಭೌತಶಾಸ್ತ್ರ-100, ರಸಾಯನಶಾಸ್ತ್ರ-100, ಗಣಿತ-100 ಮತ್ತು ಗಣಕ ವಿಜ್ಞಾನ-100) ಪಡೆದು ದ್ವಿತೀಯ, ದೇವಿಪ್ರಸಾದ್ ಶೆಣೈ (586) ಅಂಕ ಭೌತಶಾಸ್ತ್ರ-100, ಗಣಿತ-100, ಜೀವಶಾಸ್ತ್ರ-100 ಪಡೆದು ತೃತೀಯ ಸ್ಥಾನಿಯಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಧ್ಯಾನ (590) ಅಂಕ (ಕನ್ನಡ-100, ಲೆಕ್ಕಶಾಸ್ತ್ರ ಅಧ್ಯಯನ-100) ಪಡೆಯುವ ಮೂಲಕ ಪ್ರಥಮ ಸ್ಥಾನಿಯಾಗಿದ್ದು, ರಿಷಾಂತ್ ವೈ.ಪಿ. (581), ದ್ವಿತೀಯ ಸ್ಥಾನಿಯಾಗಿದ್ದು, ಶಾನ್ ಹರ್ವಿನ್ ಫೆರ್ನಾಂಡಿಸ್ (580) ತೃತೀಯ ಸ್ಥಾನ ಪಡೆದಿದ್ದಾರೆ. ಕಾಲೇಜು ಮೊದಲ ಪ್ರಯತ್ನದಲ್ಲಿಯೇ ಅದ್ವಿತೀಯ ಸಾಧನೆ ತೋರಿದ್ದಾರೆ.

ಈ ಎಲ್ಲ ವಿದ್ಯಾರ್ಥಿಗಳು ಜೆಇಇ ಮೇನ್ಸ್ -2026 ಪ್ರಥಮ ಹಂತದಲ್ಲಿ 99 ಪರ್ಸೆಂಟೈಲ್ ಪಡೆದಿದ್ದು, ಇದೀಗ ಬೋರ್ಡ್ ಪರೀಕ್ಷೆಯಲ್ಲೂ ಉತ್ತಮ ಸಾಧನೆ ತೋರಿದ್ದಾರೆ.ಸಾಧಕ ವಿದ್ಯಾರ್ಥಿಗಳನ್ನು ವಿದ್ವತ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಪ್ರಶಂಸಿದ್ದಾರೆ.

Related posts

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

Suddi Udaya

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

Suddi Udaya

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya

ಹೊಸಪಟ್ಣ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಯನಾಡು ಗೆಳೆಯರ ಬಳಗ ಸೇವಾ ಸಂಸ್ಥೆಯ ಗೌರವಾಧ್ಯಕ್ಷ ನೆಲ್ವಿಸ್ಟರ್ ಪಿಂಟೋ ರವರಿಗೆ ಸನ್ಮಾನ

Suddi Udaya

ಲಾಯಿಲದಲ್ಲಿ ಕೃಷಿ/ತೋಟಗಾರಿಕೆ ಯಂತ್ರೋಪಕರಣಗಳ ಮಾರಾಟ ಹಾಗೂ ಸರ್ವೀಸ್ ಸೆಂಟರ್ ಮಳಿಗೆ ಉದ್ಘಾಟನೆ

Suddi Udaya
error: Content is protected !!