22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ವಿದ್ವತ್ ಪಿಯು ಕಾಲೇಜಿಗೆ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ತನುಶ್ರೀ ಶೇ.98.83

ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಪ್ರಥಮ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ ದಾಖಲಿಸುವ ಮೂಲಕ ವಿದ್ಯಾರ್ಥಿಗಳು ಅಮೋಘ ಸಾಧನೆ ತೋರಿದ್ದಾರೆ.

ಪರೀಕ್ಷೆಗೆ ಹಾಜರಾದ ಒಟ್ಟು 154 ವಿದ್ಯಾರ್ಥಿಗಳ ಪೈಕಿ ವಿಜ್ಞಾನ ವಿಭಾಗದಲ್ಲಿ ತನುಶ್ರೀ (593) ಅಂಕ ಗಳಿಸಿ (ರಸಾಯನಶಾಸ್ತ್ರ-100, ಭೌತಶಾಸ್ತ್ರ-100 ಗಣಿತಶಾಸ್ತ್ರ-100, ಜೀವಶಾಸ್ತ್ರ-100), ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾಳೆ. ಉಳಿದಂತೆ ಚಿನ್ಮಯ್ ಜಿ.ಕೆ.(589) ಅಂಕ(ಭೌತಶಾಸ್ತ್ರ-100, ರಸಾಯನಶಾಸ್ತ್ರ-100, ಗಣಿತ-100 ಮತ್ತು ಗಣಕ ವಿಜ್ಞಾನ-100) ಪಡೆದು ದ್ವಿತೀಯ, ದೇವಿಪ್ರಸಾದ್ ಶೆಣೈ (586) ಅಂಕ ಭೌತಶಾಸ್ತ್ರ-100, ಗಣಿತ-100, ಜೀವಶಾಸ್ತ್ರ-100 ಪಡೆದು ತೃತೀಯ ಸ್ಥಾನಿಯಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಧ್ಯಾನ (590) ಅಂಕ (ಕನ್ನಡ-100, ಲೆಕ್ಕಶಾಸ್ತ್ರ ಅಧ್ಯಯನ-100) ಪಡೆಯುವ ಮೂಲಕ ಪ್ರಥಮ ಸ್ಥಾನಿಯಾಗಿದ್ದು, ರಿಷಾಂತ್ ವೈ.ಪಿ. (581), ದ್ವಿತೀಯ ಸ್ಥಾನಿಯಾಗಿದ್ದು, ಶಾನ್ ಹರ್ವಿನ್ ಫೆರ್ನಾಂಡಿಸ್ (580) ತೃತೀಯ ಸ್ಥಾನ ಪಡೆದಿದ್ದಾರೆ. ಕಾಲೇಜು ಮೊದಲ ಪ್ರಯತ್ನದಲ್ಲಿಯೇ ಅದ್ವಿತೀಯ ಸಾಧನೆ ತೋರಿದ್ದಾರೆ.

ಈ ಎಲ್ಲ ವಿದ್ಯಾರ್ಥಿಗಳು ಜೆಇಇ ಮೇನ್ಸ್ -2026 ಪ್ರಥಮ ಹಂತದಲ್ಲಿ 99 ಪರ್ಸೆಂಟೈಲ್ ಪಡೆದಿದ್ದು, ಇದೀಗ ಬೋರ್ಡ್ ಪರೀಕ್ಷೆಯಲ್ಲೂ ಉತ್ತಮ ಸಾಧನೆ ತೋರಿದ್ದಾರೆ.ಸಾಧಕ ವಿದ್ಯಾರ್ಥಿಗಳನ್ನು ವಿದ್ವತ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಪ್ರಶಂಸಿದ್ದಾರೆ.

Related posts

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವ ಪ್ರಾರಂಭ

Suddi Udaya

ಚಾರ್ಮಾಡಿ: ಅಂಗನವಾಡಿ ಸಹಾಯಕಿ ಆತ್ಮಹತ್ಯೆ

Suddi Udaya

ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಎಕ್ಸೆಲ್ ಉದ್ಯೋಗಿಗಳಿಂದ ಅಭಿನಂದನಾ ಸಮಾರಂಭ

Suddi Udaya

ಮಳೆಗಾಲದ ಮೆಗಾ ಆಫರ್ ಸೇಲ್‌ಗೆ ಚಾಲನೆ – ಸುನಿಲ್ ಸಿಲ್ಕ್ ಸಾರೀಸ್‌ನಲ್ಲಿ ಆಕರ್ಷಕ ರಿಯಾಯಿತಿಗಳ ಮಹಾಪರ್ವ

Suddi Udaya

ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಧನಲಕ್ಷ್ಮೀ ಪೂಜೆ, ಗೋ ಪೂಜೆ, ವಾಹನ ಪೂಜೆ ,ಆಯುಧ ಪೂಜೆ ಹಾಗೂ ಹೆಣ್ಣು ಕರು ದಾನ ಕಾರ್ಯಕ್ರಮ

Suddi Udaya
error: Content is protected !!