26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ- ಅಗ್ನಿ ಗುಳಿಗ ದೈವದ ಕೋಲ

ಮೇಲಂತಬೆಟ್ಟು: ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ ಮೇಲಂತಬೆಟ್ಟುನಲ್ಲಿ ಶ್ರೀ ದೇವಿ ಭಗವತಿ ಅಮ್ಮನವರ 17ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಎ.8 ರಂದು ವೈಭವ ಪೂರ್ಣವಾಗಿ ಜರುಗಿತು.

ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಶ್ರೀ ಕುಕ್ಕೆಸುಬ್ರಹ್ಮಣ್ಯ ಮಠ ಇವರ ಗೌರವಾಧ್ಯಕ್ಷತೆಯಲ್ಲಿ, ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ, ಬ್ರಹ್ಮಶ್ರೀ ನಡ್ವಂತಾಡಿ ವೇದಮೂರ್ತಿ ಶ್ರೀಪಾದ ಪಾಂಗಣ್ಣಾಯ ಇವರ ಆಶೀರ್ವಾದದೊಂದಿಗೆ ಈ ಕಾರ್ಯಕ್ರಮ ನಡೆಯಿತು.

ಬೆಳಿಗ್ಗೆ ಆಚಾರ್ಯವರಣ, ಫಲನ್ಯಾಸ, ಸ್ವಸ್ತಿ ಪುಣ್ಯಾಹ, ಗಣಪತಿ ಹೋಮ, ಕಲಶ ಪೂಜೆ ನವಕ ಕಲಶಾಭಿಷೇಕ ದೇವಿಗೆ ಪಂಚಾಮೃತ ಅಭಿಷೇಕ, ಬೆಳಿಗ್ಗೆ ಗಂಟೆ ೯ಕ್ಕೆ ಗುರು ಪೂಜೆ, ದುರ್ಗಾ ಹೋಮ ಮಧ್ಯಾಹ್ನ ಶ್ರೀದೇವಿಗೆ ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಸಂಜೆ ಶ್ರೀ ಚಕ್ರಪೂಜೆ ಪ್ರಾರಂಭಗೊಂಡಿತು. ಬಳಿಕ ಶ್ರೀ ದೇವಿ ಭಗವತೀ ಅಮ್ಮ ಭಜನಾ ಮಂಡಳಿ ಮೇಲಂತಬೆಟ್ಟು ಇವರಿಂದ ಭಜನಾ ಕಾರ್ಯಕ್ರಮ, ಶ್ರೀ ಚಕ್ರಪೂಜೆ ನೂರಾರು ಭಕ್ತರ ಉಪಸ್ಥಿತಿಯಲ್ಲಿ ಸಂಪನ್ನಗೊಂಡು ಶ್ರೀ ದೇವಿಗೆ ಮಹಾ ರಂಗ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ಜರುಗಿತು. ರಾತ್ರಿ ಅಗ್ನಿಗುಳಿಗ ದೈವಕ್ಕೆ “ಸಿರಿ ಸಿಂಗಾರದ ಕೋಲ” ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಊರ ಹಾಗೂ ಪರವೂರಿನ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಧನ್ಯತೆಯನ್ನು ಪಡೆದರು. ದೇವಸ್ಥಾನದ ಧರ್ಮದರ್ಶಿ ಯೋಗೀಶ್ ಪೂಜಾರಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಾನಂದ ಅಂಕಾಜೆ, ಕಾರ್ಯದರ್ಶಿ ಪ್ರಸನ್ನ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಭ್ರಾಮರಿ ಮಾಪಲಾಡಿ, ಅರ್ಚಕ ಲಕ್ಷ್ಮಣ ಶಾಂತಿ, ಪ್ರಧಾನ ಅರ್ಚಕ ಯಶವಂತ ಶಾಂತಿ, ಭಜನಾ ಸಮಿತಿ ಅಧ್ಯಕ್ಷ ತಿಮ್ಮಪ್ಪ ಪೂಜಾರಿ ಮಾಪಲಾಡಿ ಹಾಗೂ ಊರ ಹಾಗೂ ಪರವೂರ ಭಕ್ತರ ಸಹಕಾರದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಮೇಲಂತಬೆಟ್ಟು ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿದರು.

Related posts

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಪುರ್ಟಾಡೊ ನೇಮಕ

Suddi Udaya

ನೇತ್ರಾವತಿ ಸ್ನಾನಘಟ್ಟದಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಜೂ. 23: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!