23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಸರಸ್ವತಿ ಗೋಮಂದಿರ ಲೋಕಾರ್ಪಣೆ: ಅಳಿವಿನಂಚಿನಲ್ಲಿರುವ ದೇಸಿ ಮಲೆನಾಡು ಗಿಡ್ಡ ತಳಿಯ ಗೋವುಗಳನ್ನು ಸಾಕಿ ಬೆಳೆಸುವ ವಿಶಿಷ್ಟ ಯೋಜನೆ :ಕಾಲೇಜು ಕ್ಯಾಂಪಸ್ ನಲ್ಲಿ ಗೋಶಾಲೆ, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ

ಬೆಳ್ತಂಗಡಿ: ಹಲವು ಶೈಕ್ಷಣಿಕ ದಾಖಲೆಗಳ ಮೂಲಕ ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಹೆಸರುವಾಸಿಯಾದ ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣ ಇಂದು ಹೊಸ ವಿಷಯಕ್ಕೆ ಗಮನ ಸೆಳೆಯಿತು. ಏಪ್ರಿಲ್ 10 ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರ ಜನ್ಮ ದಿನಾಚರಣೆಯ ಶುಭವಸರದಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರವನ್ನು ಲೋಕಾರ್ಪಣೆಗೊಳಿಸಲಾಯಿತು.

ದೇಸಿ ಮಲೆನಾಡು ಗಿಡ್ಡ ತಳಿಯ ಹಸು ಕರುಗಳಿಗೆ ಗೋಪೂಜೆ ನೇರವೇರಿಸಿ,ಗೋಶಾಲೆಗೆ ಚಾಲನೆ ನೀಡಲಾಯಿತು.ಕಾಲೇಜು ಕ್ಯಾಂಪಸ್ ನಲ್ಲಿ ಗೋಶಾಲೆ ಆರಂಭಿಸಿರುವುದಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆಗೋ ಮಂದಿರವನ್ನು ಮಲೆನಾಡು ಗಿಡ್ಡ ತಳಿಗಳ ಸಂರಕ್ಷಣೆ ಹಾಗೂ ಸಂವರ್ಧನಾ ಅಭಿಯಾನದ ಸಂಘಟಕರಾದ ಅಕ್ಷಯ ಆಳ್ವ ಅವರು ಲೋಕಾರ್ಪಣೆಗೊಳಿಸಿ ಮಾತಮಾಡಿ ದೇಸಿ ತಳಿ ಗೋವುಗಳ ಸಂರಕ್ಷಣೆ ಭಾರತೀಯರಾದ ನಮ್ಮ ಆದ್ಯ ಕರ್ತವ್ಯ ಎಂದರು.

ಮುಖ್ಯ ಅತಿಥಿಗಳಾದ ವಿಶ್ರಾಂತ ಪಶು ವೈದ್ಯಾಧಿಕಾರಿ ಆನಂದ ಶೆಟ್ಟಿ ಅವರು ಹಾಗೂ ಮಂಗಳೂರು ಜನತಾ ಬಜಾರ್ ನ ಅಧ್ಯಕ್ಷರಾದ ಕೆ ಪ್ರಸನ್ನ ಭಟ್ ಅವರು ಶುಭಾಶಂಸನೆ ಮಾಡಿದರು. ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿ ಕೃಷಿ ಕುಟುಂಬದಿಂದ ಬಂದ ನಾನು ಹೈನುಗಾರಿಕೆಯನ್ನು ಬಹಳವಾಗಿ ಇಷ್ಟ ಪಟ್ಟವನು. ಇದೀಗ ಮಲೆನಾಡು ಗಿಡ್ಡ ಹಸುಗಳನ್ನೇ ನಮ್ಮ ಕ್ಯಾಂಪಸ್ ನಲ್ಲಿ ಸಾಕಿ ಬೆಳೆಸುತ್ತೇವೆ ಎಂದರು.

ಈ ಸಂದರ್ಭದಲ್ಲಿ ಆನಂದ ಶೆಟ್ಟಿ ವಾತ್ಸಲ್ಯ, ಸುನೀಶ್ ಕುಮಾರ್ ಕಡಂಬು,ಎಕ್ಸೆಲ್ ಸಂಸ್ಥೆಯ ಸಹನಾ ಜೈನ್ ಸೇರಿದಂತೆ, ಉಪನ್ಯಾಸಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಉಪನ್ಯಾಸಕಿ ಅನನ್ಯ ಜೈನ್ ನಿರೂಪಿಸಿದರು. ಅರಮಲೆಬೆಟ್ಟ ಕ್ಯಾಂಪಸ್ ನ ಪ್ರಾಚಾರ್ಯ ಡಾ. ಪ್ರಜ್ವಲ್ ಕಜೆ ವಂದಿಸಿದರು.

Related posts

ಎಸ್.ಡಿ.ಎಂ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರು, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್ ಪ್ರಭಾಕರ್ ವಿಧಿವಶ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ ; ಸರ್ವಧರ್ಮ ಸಮನ್ವಯ ಸಭೆ

Suddi Udaya

ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ನೀಲಿಯರ ಮನೆಯ ಜೋಮ ಕುರಿಯನ್ ನಿಧನ

Suddi Udaya

ಫೆ.27: ವೇಣೂರು ಬಜಿರೆಯಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಗಾಗಿ ಜಾಗೃತಿ ಸಭೆ

Suddi Udaya
error: Content is protected !!