September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

ಕೊಕ್ಕಡ: ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯು ಬಲ್ಲೆ ಹಾಗೂ ಕೆಸರಿನಿಂದ ತುಂಬಿದ್ದು , ಸ್ವಚ್ಚಗೊಳಿಸಿಕೊಡುವ ಬಗ್ಗೆ ಶಾಲಾ ಮುಖ್ಯಶಿಕ್ಷಕ ಶ್ರೀಧರ ಕೆ ಎಸ್ ಅವರ ವಿನಂತಿಯ ಮೇರೆಗೆ ಎ.5ರಂದು ಕೊಕ್ಕಡದ ಡಿವೈಎಫ್ಐ ತಂಡ ಶ್ರಮದಾನದ ಮೂಲಕ ಬಾವಿಯನ್ನು ಸ್ವಚ್ಚಗೊಳಿಸಿಕೊಟ್ಟಿರುತ್ತಾರೆ.‌

ಅಗತ್ಯ ಪರಿಕರಗಳನ್ನು ಬಾಬು ಮರುವಂತಿಲ, ಚಂದ್ರಶೇಖರ ಗೌಡ ಅನಾರು ಒದಗಿಸಿದ್ದರು. ಶ್ರಮದಾನಿಗಳಾಗಿ ಬಾಬು ಮರುವಂತಿಲ, ಬಾಬು ಬಾಂತಿಮಾರು, ಮಾಧವ ಅಡ್ಯೈ, ಗುರುಪ್ರಸಾದ್ ಅಡ್ಯೈ, ರಾಘವ ಅಡ್ಯೈ ಕಾರ್ಯನಿರ್ವಹಿಸಿ ಬಾವಿ ಸ್ವಚ್ಚಗೊಳಿಸಿಕೊಟ್ಟರು.

ಇನ್ಸ್ಪೈರ್ ಸ್ಪೋರ್ಟ್ಸ್ ಕ್ಲಬ್ ಕೊಕ್ಕಡ ಇವರು ಶ್ರಮದಾನಿಗಳಿಗೆ ತಂಪು ಪಾನೀಯ, ಐಸ್ ಕ್ರೀಂ ಒದಗಿಸಿದರು. ಶ್ರೀಧರ್ ಕೆ ಎಸ್ ಉಪಾಹಾರವ‌ನ್ನು ಒದಗಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಶ್ರೀಧರ್ ಕೆ ಎಸ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನವಾಜ್ ಎನ್.ಎಸ್, ಮಾಜಿ ಅಧ್ಯಕ್ಷ ಉಮ್ಮರ್ ಬೈಲಂಗಡಿ, ಶ್ಯಾಮರಾಜ್ ಪಟ್ರಮೆ, ಅನ್ಸಾರ್ ಹಳ್ಳಿಂಗೇರಿ ಮೊದಲಾದವರು ಉಪಸ್ಥಿತರಿದ್ದು ಸಹಕಾರ ನೀಡಿದರು.

Related posts

ಹೊಸಂಗಡಿ ಬಲ್ಲಂಗೇರಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ.2ಲಕ್ಷ ಡಿಡಿ ವಿತರಣೆ

Suddi Udaya

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲ ಸೇವೆ ಕಾರ್ಯಕ್ರಮ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ ಪ್ರಕರಣ: ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿದ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya
error: Content is protected !!