July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

ಕೊಕ್ಕಡ: ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯು ಬಲ್ಲೆ ಹಾಗೂ ಕೆಸರಿನಿಂದ ತುಂಬಿದ್ದು , ಸ್ವಚ್ಚಗೊಳಿಸಿಕೊಡುವ ಬಗ್ಗೆ ಶಾಲಾ ಮುಖ್ಯಶಿಕ್ಷಕ ಶ್ರೀಧರ ಕೆ ಎಸ್ ಅವರ ವಿನಂತಿಯ ಮೇರೆಗೆ ಎ.5ರಂದು ಕೊಕ್ಕಡದ ಡಿವೈಎಫ್ಐ ತಂಡ ಶ್ರಮದಾನದ ಮೂಲಕ ಬಾವಿಯನ್ನು ಸ್ವಚ್ಚಗೊಳಿಸಿಕೊಟ್ಟಿರುತ್ತಾರೆ.‌

ಅಗತ್ಯ ಪರಿಕರಗಳನ್ನು ಬಾಬು ಮರುವಂತಿಲ, ಚಂದ್ರಶೇಖರ ಗೌಡ ಅನಾರು ಒದಗಿಸಿದ್ದರು. ಶ್ರಮದಾನಿಗಳಾಗಿ ಬಾಬು ಮರುವಂತಿಲ, ಬಾಬು ಬಾಂತಿಮಾರು, ಮಾಧವ ಅಡ್ಯೈ, ಗುರುಪ್ರಸಾದ್ ಅಡ್ಯೈ, ರಾಘವ ಅಡ್ಯೈ ಕಾರ್ಯನಿರ್ವಹಿಸಿ ಬಾವಿ ಸ್ವಚ್ಚಗೊಳಿಸಿಕೊಟ್ಟರು.

ಇನ್ಸ್ಪೈರ್ ಸ್ಪೋರ್ಟ್ಸ್ ಕ್ಲಬ್ ಕೊಕ್ಕಡ ಇವರು ಶ್ರಮದಾನಿಗಳಿಗೆ ತಂಪು ಪಾನೀಯ, ಐಸ್ ಕ್ರೀಂ ಒದಗಿಸಿದರು. ಶ್ರೀಧರ್ ಕೆ ಎಸ್ ಉಪಾಹಾರವ‌ನ್ನು ಒದಗಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಶ್ರೀಧರ್ ಕೆ ಎಸ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನವಾಜ್ ಎನ್.ಎಸ್, ಮಾಜಿ ಅಧ್ಯಕ್ಷ ಉಮ್ಮರ್ ಬೈಲಂಗಡಿ, ಶ್ಯಾಮರಾಜ್ ಪಟ್ರಮೆ, ಅನ್ಸಾರ್ ಹಳ್ಳಿಂಗೇರಿ ಮೊದಲಾದವರು ಉಪಸ್ಥಿತರಿದ್ದು ಸಹಕಾರ ನೀಡಿದರು.

Related posts

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ

Suddi Udaya

ಹತ್ಯಡ್ಕ: ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ

Suddi Udaya

ಲಾಯಿಲ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಭೇಟಿ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಸಲ್ಮತ್ ಗೆ ಸಂಸ್ಕೃತದಲ್ಲಿ 99 ಅಂಕ

Suddi Udaya

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

Suddi Udaya
error: Content is protected !!