September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪಿಯು ಕಾಲೇಜಿಗೆ ಶೇ.98.78 ಫಲಿತಾಂಶ

ಉಜಿರೆ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉಜಿರೆಯ ಶ್ರೀ ಧ. ಮಂ. ಪದವಿಪೂರ್ವ ಕಾಲೇಜು ಶೇ.98.78 ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಹಾಜರಾದ 904 ವಿದ್ಯಾರ್ಥಿಗಳ ಪೈಕಿ 893 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದು, ವಿಜ್ಞಾನ ವಿಭಾಗದಲ್ಲಿ ಶೇ.98.62, ವಾಣಿಜ್ಯ ವಿಭಾಗದಲ್ಲಿ ಶೇ.99.69, ಕಲಾ ವಿಭಾಗದಲ್ಲಿ ಶೇ.95.77 ಫಲಿತಾಂಶ ಲಭಿಸಿದೆ.

ವಾಣಿಜ್ಯ ವಿಭಾಗದಲ್ಲಿ ಹಂಸಿನಿ ಭಿಡೆ 595 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಹಾಗೂ ರಾಜ್ಯ ಮಟ್ಟದಲ್ಲಿ 6ನೇ ರ‍್ಯಾಂಕ್, ಅಂಶುಲ ಶ್ರೇಷ್ಠ 592 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ರಾಜ್ಯ ಮಟ್ಟದಲ್ಲಿ 9ನೇ ರ‍್ಯಾಂಕ್, ವಿಜ್ಞಾನ ವಿಭಾಗದ ಅಂಕಿತಾ 591 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಹಾಗೂ ರಾಜ್ಯ ಮಟ್ಟದಲ್ಲಿ 9ನೇ ರ‍್ಯಾಂಕ್ ಪಡೆದಿದ್ದಾರೆ.

ರಾಮಚರಣ್ 591 ಅಂಕಗಳೊಂದಿಗೆ ತೃತೀಯ ಸ್ಥಾನ ಹಾಗೂ ರಾಜ್ಯ ಮಟ್ಟದಲ್ಲಿ 10ನೇ ರ‍್ಯಾಂಕ್ ಮತ್ತು ಕಲಾ ವಿಭಾಗದಲ್ಲಿ ನಿಜ ಕುಲಾಲ್ 593 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಹಾಗೂ ರಾಜ್ಯ ಮಟ್ಟದಲ್ಲಿ 4ನೇ ರ‍್ಯಾಂಕ್, ಶ್ರೀಪೂರ್ಣ ಅಂಕಗಳೊಂದಿಗೆ 588 ಕಾಲೇಜಿಗೆ ದ್ವಿತೀಯ ಸ್ಥಾನ ಹಾಗೂ ರಾಜ್ಯ ಮಟ್ಟದಲ್ಲಿ 9ನೇ ರ‍್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 510 ವಿದ್ಯಾರ್ಥಿಗಳಲ್ಲಿ 503 ಮಂದಿ ಉತ್ತೀರ್ಣಗೊಂಡಿದ್ದು, 234 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 260 ವಿದ್ಯಾರ್ಥಿಗಳು ಪ್ರಥಮ ಹಾಗೂ 9 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

ವಾಣಿಜ್ಯ ವಿಭಾಗದಲ್ಲಿ 323 ವಿದ್ಯಾರ್ಥಿಗಳಲ್ಲಿ 322 ಮಂದಿ ಉತ್ತೀರ್ಣಗೊಂಡಿದ್ದು, 132 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ , 182 ವಿದ್ಯಾರ್ಥಿಗಳು ಪ್ರಥಮ, 7 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 71 ವಿದ್ಯಾರ್ಥಿಗಳಲ್ಲಿ 68 ಮಂದಿ ಉತ್ತೀರ್ಣಗೊಂಡಿದ್ದು, 16 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 34 ವಿದ್ಯಾರ್ಥಿಗಳು ಪ್ರಥಮ, 18 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಸಾಧಕರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ., ಉಪ ಪ್ರಾಂಶುಪಾಲ ಡಾ. ರಾಜೇಶ್ ಬಿ., ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Related posts

ಬೆಳ್ತಂಗಡಿ: ವಿಶೇಷ ಸಮಗ್ರ ಪರಿಷ್ಕರಣೆ–2026 ಅಂಗವಾಗಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಅಕ್ರಮ ಗೋ ಮಾಂಸ ಮಾರಾಟ ಪ್ರಕರಣ: ಆರೋಪಿಯ ಮನೆ ಆವರಣ ಜಪ್ತಿ

Suddi Udaya

ಡಿ.3ರಂದು ಮಂಗಳೂರು ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

Suddi Udaya

ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶ

Suddi Udaya

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

Suddi Udaya
error: Content is protected !!