22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

ಕೊಕ್ಕಡ: ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯು ಬಲ್ಲೆ ಹಾಗೂ ಕೆಸರಿನಿಂದ ತುಂಬಿದ್ದು , ಸ್ವಚ್ಚಗೊಳಿಸಿಕೊಡುವ ಬಗ್ಗೆ ಶಾಲಾ ಮುಖ್ಯಶಿಕ್ಷಕ ಶ್ರೀಧರ ಕೆ ಎಸ್ ಅವರ ವಿನಂತಿಯ ಮೇರೆಗೆ ಎ.5ರಂದು ಕೊಕ್ಕಡದ ಡಿವೈಎಫ್ಐ ತಂಡ ಶ್ರಮದಾನದ ಮೂಲಕ ಬಾವಿಯನ್ನು ಸ್ವಚ್ಚಗೊಳಿಸಿಕೊಟ್ಟಿರುತ್ತಾರೆ.‌

ಅಗತ್ಯ ಪರಿಕರಗಳನ್ನು ಬಾಬು ಮರುವಂತಿಲ, ಚಂದ್ರಶೇಖರ ಗೌಡ ಅನಾರು ಒದಗಿಸಿದ್ದರು. ಶ್ರಮದಾನಿಗಳಾಗಿ ಬಾಬು ಮರುವಂತಿಲ, ಬಾಬು ಬಾಂತಿಮಾರು, ಮಾಧವ ಅಡ್ಯೈ, ಗುರುಪ್ರಸಾದ್ ಅಡ್ಯೈ, ರಾಘವ ಅಡ್ಯೈ ಕಾರ್ಯನಿರ್ವಹಿಸಿ ಬಾವಿ ಸ್ವಚ್ಚಗೊಳಿಸಿಕೊಟ್ಟರು.

ಇನ್ಸ್ಪೈರ್ ಸ್ಪೋರ್ಟ್ಸ್ ಕ್ಲಬ್ ಕೊಕ್ಕಡ ಇವರು ಶ್ರಮದಾನಿಗಳಿಗೆ ತಂಪು ಪಾನೀಯ, ಐಸ್ ಕ್ರೀಂ ಒದಗಿಸಿದರು. ಶ್ರೀಧರ್ ಕೆ ಎಸ್ ಉಪಾಹಾರವ‌ನ್ನು ಒದಗಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಶ್ರೀಧರ್ ಕೆ ಎಸ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನವಾಜ್ ಎನ್.ಎಸ್, ಮಾಜಿ ಅಧ್ಯಕ್ಷ ಉಮ್ಮರ್ ಬೈಲಂಗಡಿ, ಶ್ಯಾಮರಾಜ್ ಪಟ್ರಮೆ, ಅನ್ಸಾರ್ ಹಳ್ಳಿಂಗೇರಿ ಮೊದಲಾದವರು ಉಪಸ್ಥಿತರಿದ್ದು ಸಹಕಾರ ನೀಡಿದರು.

Related posts

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಉಜಿರೆ : ಸರ್ವಿಸ್ ಮಾಡಿ ಮನೆ ಬಳಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ಉಜಿರೆ : ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya
error: Content is protected !!