23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

ಕೊಕ್ಕಡ: ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯು ಬಲ್ಲೆ ಹಾಗೂ ಕೆಸರಿನಿಂದ ತುಂಬಿದ್ದು , ಸ್ವಚ್ಚಗೊಳಿಸಿಕೊಡುವ ಬಗ್ಗೆ ಶಾಲಾ ಮುಖ್ಯಶಿಕ್ಷಕ ಶ್ರೀಧರ ಕೆ ಎಸ್ ಅವರ ವಿನಂತಿಯ ಮೇರೆಗೆ ಎ.5ರಂದು ಕೊಕ್ಕಡದ ಡಿವೈಎಫ್ಐ ತಂಡ ಶ್ರಮದಾನದ ಮೂಲಕ ಬಾವಿಯನ್ನು ಸ್ವಚ್ಚಗೊಳಿಸಿಕೊಟ್ಟಿರುತ್ತಾರೆ.‌

ಅಗತ್ಯ ಪರಿಕರಗಳನ್ನು ಬಾಬು ಮರುವಂತಿಲ, ಚಂದ್ರಶೇಖರ ಗೌಡ ಅನಾರು ಒದಗಿಸಿದ್ದರು. ಶ್ರಮದಾನಿಗಳಾಗಿ ಬಾಬು ಮರುವಂತಿಲ, ಬಾಬು ಬಾಂತಿಮಾರು, ಮಾಧವ ಅಡ್ಯೈ, ಗುರುಪ್ರಸಾದ್ ಅಡ್ಯೈ, ರಾಘವ ಅಡ್ಯೈ ಕಾರ್ಯನಿರ್ವಹಿಸಿ ಬಾವಿ ಸ್ವಚ್ಚಗೊಳಿಸಿಕೊಟ್ಟರು.

ಇನ್ಸ್ಪೈರ್ ಸ್ಪೋರ್ಟ್ಸ್ ಕ್ಲಬ್ ಕೊಕ್ಕಡ ಇವರು ಶ್ರಮದಾನಿಗಳಿಗೆ ತಂಪು ಪಾನೀಯ, ಐಸ್ ಕ್ರೀಂ ಒದಗಿಸಿದರು. ಶ್ರೀಧರ್ ಕೆ ಎಸ್ ಉಪಾಹಾರವ‌ನ್ನು ಒದಗಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಶ್ರೀಧರ್ ಕೆ ಎಸ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನವಾಜ್ ಎನ್.ಎಸ್, ಮಾಜಿ ಅಧ್ಯಕ್ಷ ಉಮ್ಮರ್ ಬೈಲಂಗಡಿ, ಶ್ಯಾಮರಾಜ್ ಪಟ್ರಮೆ, ಅನ್ಸಾರ್ ಹಳ್ಳಿಂಗೇರಿ ಮೊದಲಾದವರು ಉಪಸ್ಥಿತರಿದ್ದು ಸಹಕಾರ ನೀಡಿದರು.

Related posts

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತ: ಇಬ್ಬರಿಗೆ ಗಾಯ

Suddi Udaya

ಮಾಗಡಿ ಕನ್ನಡ ಪರ ಸಂಘಟನೆಗಳ ಸದಸ್ಯರ ಧರ್ಮಸ್ಥಳ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

Suddi Udaya

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya

ಸುನ್ನೀ ವಿದ್ಯಾಬ್ಯಾಸ ಬೋರ್ಡ್ ಫಲಿತಾಂಶ: ಕೊಯ್ಯೂರು ಉಣ್ಣಾಲು ಮದರಸದ ಮುಹಮ್ಮದ್ ರಾಝಿ, ಫಾತಿಮತ್ ನುಝೈರಾ ರೇಂಜ್ ಗೆ ಪ್ರಥಮ

Suddi Udaya
error: Content is protected !!