23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲೂಮೋಸ್ – ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ; ನಮ್ಮ ಕಲ್ಪನೆಯೇ ನಮ್ಮ ಮಿತಿ: ಡಾ. ರಾಘವೇಂದ್ರ

ಉಜಿರೆ: “ಸಿನಿಮಾ ಹಾಗೂ ಡಿಜಿಟಲ್ ಕ್ಷೇತ್ರ ಎಲ್ಲರಿಗೂ ಒಂದು ಕ್ರಿಯೇಟಿವ್ ಸ್ವಾತಂತ್ರ್ಯ ನೀಡುತ್ತದೆ. ಆದರೆ ಆ ಸ್ವಾತಂತ್ರ್ಯದ ಜೊತೆಗೆ ಜವಾಬ್ದಾರಿಗಳೂ ಇರುತ್ತವೆ. ಸಿಕ್ಕ ಸ್ವಾತಂತ್ರ್ಯವನ್ನು ಸಮಾಜಕ್ಕೆ ಪೂರಕವಾಗಿ ಬಳಸಬೇಕಾಗಿರುವುದೇ ನಮ್ಮ ಜವಾಬ್ದಾರಿ ಆಗಿದೆ” ಎಂದು ಎಸ್ಡಿಎಂ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರಾಘವೇಂದ್ರ ಎಸ್ ಹೇಳಿದರು.

ಎಸ್ಡಿಎಂ ಕಾಲೇಜಿನ ಬಿ. ವೋಕ್. ಡಿಜಿಟಲ್ ಮೀಡಿಯಾ ಹಾಗೂ ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ಹಾಗೂ ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, “ಸಿನಿಮಾ ಕ್ಷೇತ್ರ ಇಂದು ವ್ಯಾಪಾರೀಕರಣ ಆಗುತ್ತಿರುವುದು ಕಳವಳಕಾರಿ ಸಂಗತಿ. ಆದರೆ ನಾವು ಜವಾಬ್ದಾರಿಯುತ ಕ್ರಿಯೇಟರ್‌ಗಳಾಗಿ ಸಮಾಜಕ್ಕೆ ಉಪಯೋಗ ಆಗುವಂತಹ ಕಂಟೆಂಟ್ ಕೊಡುವವರಾಗಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಅಂಕಿತಾ ಹಾಗೂ ವಿದ್ಯಾರ್ಥಿ ಅಚ್ಯುತ್, ಕ್ರಮವಾಗಿ ಲೂಮೋಸ್ ಸಂಘ ಹಾಗೂ ಟೆಸರಾಕ್ಟ್ ಸೊಸೈಟಿಯ ವಾರ್ಷಿಕ ವರದಿಯನ್ನು ವಾಚಿಸಿದರು.

ಈ ಸಂದರ್ಭದಲ್ಲಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅಶ್ವಿನಿ ಜೈನ್, ಇಂದುಧರ್ ಕಿಣಿ ಹಾಗೂ ತೇಜಸ್ವಿನಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಅಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರಿಗೆ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ

Suddi Udaya

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya

ಎ.12: ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಬಂದಾರು ಸ.ಹಿ. ಪ್ರಾ. ಶಾಲೆಯಲ್ಲಿ ಬೂತ್ ಸಂಖ್ಯೆ 217ರಲ್ಲಿ ತ್ರಾಂತಿಕ ದೋಷದಿಂದ ಮತದಾನ ಸ್ಥಗಿತ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದಿಂದ ಡಿ.2 ಯಕ್ಷ ಸಂಭ್ರಮ 2023

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

Suddi Udaya
error: Content is protected !!