25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲೂಮೋಸ್ – ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ; ನಮ್ಮ ಕಲ್ಪನೆಯೇ ನಮ್ಮ ಮಿತಿ: ಡಾ. ರಾಘವೇಂದ್ರ

ಉಜಿರೆ: “ಸಿನಿಮಾ ಹಾಗೂ ಡಿಜಿಟಲ್ ಕ್ಷೇತ್ರ ಎಲ್ಲರಿಗೂ ಒಂದು ಕ್ರಿಯೇಟಿವ್ ಸ್ವಾತಂತ್ರ್ಯ ನೀಡುತ್ತದೆ. ಆದರೆ ಆ ಸ್ವಾತಂತ್ರ್ಯದ ಜೊತೆಗೆ ಜವಾಬ್ದಾರಿಗಳೂ ಇರುತ್ತವೆ. ಸಿಕ್ಕ ಸ್ವಾತಂತ್ರ್ಯವನ್ನು ಸಮಾಜಕ್ಕೆ ಪೂರಕವಾಗಿ ಬಳಸಬೇಕಾಗಿರುವುದೇ ನಮ್ಮ ಜವಾಬ್ದಾರಿ ಆಗಿದೆ” ಎಂದು ಎಸ್ಡಿಎಂ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರಾಘವೇಂದ್ರ ಎಸ್ ಹೇಳಿದರು.

ಎಸ್ಡಿಎಂ ಕಾಲೇಜಿನ ಬಿ. ವೋಕ್. ಡಿಜಿಟಲ್ ಮೀಡಿಯಾ ಹಾಗೂ ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ಹಾಗೂ ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, “ಸಿನಿಮಾ ಕ್ಷೇತ್ರ ಇಂದು ವ್ಯಾಪಾರೀಕರಣ ಆಗುತ್ತಿರುವುದು ಕಳವಳಕಾರಿ ಸಂಗತಿ. ಆದರೆ ನಾವು ಜವಾಬ್ದಾರಿಯುತ ಕ್ರಿಯೇಟರ್‌ಗಳಾಗಿ ಸಮಾಜಕ್ಕೆ ಉಪಯೋಗ ಆಗುವಂತಹ ಕಂಟೆಂಟ್ ಕೊಡುವವರಾಗಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಅಂಕಿತಾ ಹಾಗೂ ವಿದ್ಯಾರ್ಥಿ ಅಚ್ಯುತ್, ಕ್ರಮವಾಗಿ ಲೂಮೋಸ್ ಸಂಘ ಹಾಗೂ ಟೆಸರಾಕ್ಟ್ ಸೊಸೈಟಿಯ ವಾರ್ಷಿಕ ವರದಿಯನ್ನು ವಾಚಿಸಿದರು.

ಈ ಸಂದರ್ಭದಲ್ಲಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅಶ್ವಿನಿ ಜೈನ್, ಇಂದುಧರ್ ಕಿಣಿ ಹಾಗೂ ತೇಜಸ್ವಿನಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಅಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya

ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಸ್ತಬ್ಧಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ನಿಂದ “ನಿಮ್ಮ ಹಣ ನಿಮ್ಮ ಹಕ್ಕು” ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ

Suddi Udaya

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ವಾಲಿಬಾಲ್ ಪಂದ್ಯಾಟ: ಅನುಗ್ರಹ ಪ್ರೌಢಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ

Suddi Udaya

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!