24 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ; ನಯನಾಡು ಸುಶ್ಮಿತಾ ಆಶಾಲತಾ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್

ಬೆಳ್ತಂಗಡಿ; ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ನಯನಾಡು ಸುಶ್ಮಿತಾ ಆಶಾಲತಾ ರವರು ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದಿರುತ್ತಾರೆ. ಪ್ರಾಥಮಿಕ ಶಿಕ್ಷಣವನ್ನು ಅನುದಾನಿತ ಶಾಲೆ ನೈನಾಡು ಹಾಗೂ ಪ್ರೌಢ ಶಾಲಾ ಶಿಕ್ಷಣವನ್ನು (ಕನ್ನಡ ಮಾಧ್ಯಮದಲ್ಲಿ )ಸರಕಾರಿ ಪ್ರೌಢ ಶಾಲೆ ನೈನಾಡು ಇಲ್ಲಿ ಪೂರೈಸಿ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ.97 ಅಂಕ ಪಡೆದು ನಂತರ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನಲ್ಲಿ ಕಾಮರ್ಸ್ ವಿಭಾಗದಲ್ಲಿ ಪಿಯುಸಿಯಲ್ಲಿ ಈ ಅಭೂತಪೂರ್ವ ಸಾಧನೆ ಮಾಡಿರುತ್ತಾಳೆ.


ಆರ್ಥಿಕವಾಗಿ ತೀರಾ ಕಷ್ಟದಲ್ಲಿರುವ ಬಡ ಕುಟುಂಬದ ವಿದ್ಯಾರ್ಥಿ ಈಕೆ. ಎಳವೆಯಲ್ಲೇ ತಂದೆಯನ್ನು ಕಳೆದುಕೊಂಡ ಈಕೆಗೆ ಅಮ್ಮನ ಕಠಿಣ ಪರಿಶ್ರಮವೇ ಸಾಧನೆಗೆ ದಾರಿ ತೋರಿಸಿದ್ದು. ಸುಶ್ಮಿತಾ ಳ ಅಣ್ಣ ಕಾಲೇಜು ಓದುತ್ತಿದ್ದು, ರಜಾ ದಿನಗಳಲ್ಲಿ ಕೂಲಿ ಕೆಲಸ ಮಾಡಿ ತನ್ನ ಶಾಲಾ ಖರ್ಚಿನ ಹಣ ಹೊಂದಾಣಿಕೆ ಮಾಡಲು ತಾಯಿಗೆ ನೆರವಾಗುತ್ತಿದ್ದು, ಈಕೆಯ ಸಹೋದರಿ ಅಮೃತಾ ಕೂಡ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ಪುಂಜಾಲಕಟ್ಟೆ ಯ ಸರಕಾರಿ ಕಾಲೇಜಿನಲ್ಲಿ ಓದುತ್ತಿದ್ದು, ತಾನು ಕೂಡ ಶೇ. 91 ಪ್ರತಿಶತ ಅಂಕ ಪಡೆದ ಸಾಧನೆ ಮಾಡಿರುತ್ತಾಳೆ.

ಇವಳಿಗೆ ನೈನಾಡಿನ ಶ್ರೀ ರಾಮ ಭಜನಾ ಮಂದಿರ, ಶ್ರೀ ರಾಮ ಯುವಕ ಸಂಘ, ನಿವೇದಿತಾ ಮಾತೃ ಮಂಡಳಿ ಹಾಗೂ ನಿವೇದಿತಾ ಭಗಿನಿಯರ ತಂಡದ ವತಿಯಿಂದ ಹಾರ್ಧಿಕ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

Related posts

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರದ ಪ್ರತಿನಿಧಿ ಸಭೆ

Suddi Udaya

ಸೆ.22-ಅ.1: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya

ಲಾಯಿಲ: ಟಿಬಿ ಕ್ರಾಸ್ ನಲ್ಲಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಖ್ಯಾತ ನೋಟರಿ ನ್ಯಾಯವಾದಿ ಸೇವಿಯರ್ ಪಾಲೇಲಿ ಕಾಂಗ್ರೆಸ್ ಸೇರ್ಪಡೆ

Suddi Udaya
error: Content is protected !!