22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ; ನಯನಾಡು ಸುಶ್ಮಿತಾ ಆಶಾಲತಾ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್

ಬೆಳ್ತಂಗಡಿ; ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ನಯನಾಡು ಸುಶ್ಮಿತಾ ಆಶಾಲತಾ ರವರು ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದಿರುತ್ತಾರೆ. ಪ್ರಾಥಮಿಕ ಶಿಕ್ಷಣವನ್ನು ಅನುದಾನಿತ ಶಾಲೆ ನೈನಾಡು ಹಾಗೂ ಪ್ರೌಢ ಶಾಲಾ ಶಿಕ್ಷಣವನ್ನು (ಕನ್ನಡ ಮಾಧ್ಯಮದಲ್ಲಿ )ಸರಕಾರಿ ಪ್ರೌಢ ಶಾಲೆ ನೈನಾಡು ಇಲ್ಲಿ ಪೂರೈಸಿ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ.97 ಅಂಕ ಪಡೆದು ನಂತರ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನಲ್ಲಿ ಕಾಮರ್ಸ್ ವಿಭಾಗದಲ್ಲಿ ಪಿಯುಸಿಯಲ್ಲಿ ಈ ಅಭೂತಪೂರ್ವ ಸಾಧನೆ ಮಾಡಿರುತ್ತಾಳೆ.


ಆರ್ಥಿಕವಾಗಿ ತೀರಾ ಕಷ್ಟದಲ್ಲಿರುವ ಬಡ ಕುಟುಂಬದ ವಿದ್ಯಾರ್ಥಿ ಈಕೆ. ಎಳವೆಯಲ್ಲೇ ತಂದೆಯನ್ನು ಕಳೆದುಕೊಂಡ ಈಕೆಗೆ ಅಮ್ಮನ ಕಠಿಣ ಪರಿಶ್ರಮವೇ ಸಾಧನೆಗೆ ದಾರಿ ತೋರಿಸಿದ್ದು. ಸುಶ್ಮಿತಾ ಳ ಅಣ್ಣ ಕಾಲೇಜು ಓದುತ್ತಿದ್ದು, ರಜಾ ದಿನಗಳಲ್ಲಿ ಕೂಲಿ ಕೆಲಸ ಮಾಡಿ ತನ್ನ ಶಾಲಾ ಖರ್ಚಿನ ಹಣ ಹೊಂದಾಣಿಕೆ ಮಾಡಲು ತಾಯಿಗೆ ನೆರವಾಗುತ್ತಿದ್ದು, ಈಕೆಯ ಸಹೋದರಿ ಅಮೃತಾ ಕೂಡ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ಪುಂಜಾಲಕಟ್ಟೆ ಯ ಸರಕಾರಿ ಕಾಲೇಜಿನಲ್ಲಿ ಓದುತ್ತಿದ್ದು, ತಾನು ಕೂಡ ಶೇ. 91 ಪ್ರತಿಶತ ಅಂಕ ಪಡೆದ ಸಾಧನೆ ಮಾಡಿರುತ್ತಾಳೆ.

ಇವಳಿಗೆ ನೈನಾಡಿನ ಶ್ರೀ ರಾಮ ಭಜನಾ ಮಂದಿರ, ಶ್ರೀ ರಾಮ ಯುವಕ ಸಂಘ, ನಿವೇದಿತಾ ಮಾತೃ ಮಂಡಳಿ ಹಾಗೂ ನಿವೇದಿತಾ ಭಗಿನಿಯರ ತಂಡದ ವತಿಯಿಂದ ಹಾರ್ಧಿಕ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

Related posts

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

Suddi Udaya

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

Suddi Udaya

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಉರುವಾಲು ನಿವಾಸಿ ಸೀತಾ ರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಅಕ್ರಮ ಕಸ ವಿಲೇವಾರಿ: ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya
error: Content is protected !!